ವಿಜಯನಗರ: ಮಹಾಮಾರಿ ಕರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಭೆ, ಸಮಾರಂಭ ಮದುವೆ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಆದರೂ ಕೆಲವೆಡೆ ನಿಯಮ ಉಲ್ಲಂಘಿಸಿ ಮದುವೆ ಸಮಾರಂಭ ನಡೆಯುತ್ತಿದೆ. ಜನರಿಗೆ ಬುದ್ಧಿ ಹೇಳಬೇಕಾದ ಜನ ಪ್ರತಿನಿಧಿಯೇ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳವು ಮೂಲಕ ಸಾರ್ವಜನಿಕರ ಟೀಕೆಗೆ ಗ್ರಾಸವಾದ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಬಳ್ಳಾರಿ- ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಕರೊನಾ ಸೋಂಕು ಹೆಚ್ಚಾಗುತ್ತಿದ್ದು. ನಿಗದಿಯಾಗಿದ್ದ ಸರಳ, ಅದ್ದೂರಿ ಮದುವೆಗಳನ್ನ ಮುಂದೂಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದಕ್ಕೂ ಕ್ಯಾರೆ ಎನ್ನದ ಮಾಜಿ ಶಾಸಕ ನೇಮಿರಾಜ್ ನಾಯ್ಕ್ರ ಸಂಬಂಧಿಕರು ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ಮದುವೆ ಮಾಡಿದ್ದಾರೆ. ವಿಪರ್ಯಾಸ ಅಂದ್ರೆ ಈ ಕಾರ್ಯಕ್ರಮದಲ್ಲಿ ಖುದ್ದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಅವರೂ ಪಾಲ್ಗೊಂಡಿದ್ದರು.
ಕರೊನಾ ಪಾಸಿಟಿವ್ ಬಂದರೂ ಮದ್ವೆ ಮನೆಗೆ ಬಂದ ವಕೀಲ! ಪ್ರಶ್ನಿಸಿದ್ದಕ್ಕೆ ಉಡಾಫೆ, ಮುಂದೆ ಆಗಿದ್ದೆಲ್ಲವೂ ಅವಾಂತರ