VIDEO| ಡಿಸಿ ಆದೇಶಕ್ಕೂ ಕ್ಯಾರೆ ಎನ್ನದ ಮಂಡ್ಯ ತಹಸೀಲ್ದಾರ್, ತಡರಾತ್ರಿವರೆಗೂ ಭರ್ಜರಿ ಪಾರ್ಟಿ!

ಮಂಡ್ಯ: ಕರೊನಾ ರೂಲ್ಸ್​ ಬ್ರೇಕ್​ ಮಾಡಿ ನೂರಾರು ಜನರ ಸಮ್ಮುಖದಲ್ಲಿ ಮಂಡ್ಯ ತಹಸೀಲ್ದಾರ್ ಚಂದ್ರಶೇಖರ ಶಂಗಾಳಿ ಅವರು ಮಗನ ಬರ್ತ್​ ಡೇ ಪಾರ್ಟಿಯನ್ನು ಭರ್ಜರಿಯಾಗಿ ಆಚರಿಸಿದ್ದು, ವಿಡಿಯೋ ವೈರಲ್​ ಆಗಿದೆ. ಶ್ರೀರಂಗಪಟ್ಟಣ ತಾಲೂಕು ಕೆಆರ್‌ಎಸ್ ಅಣೆಕಟ್ಟೆ ಬಳಿಯ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಬುಧವಾರ ಸಂಜೆಯಿಂದ ತಡರಾತ್ರಿವರೆಗೂ ಪಾರ್ಟಿ ನಡೆದಿದ್ದು, ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನೂ ಕಾಪಾಡಿಕೊಳ್ಳದೆ ಜನ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ. ತಹಸೀಲ್ದಾರ್ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಕರೊನಾ ಹಿನ್ನೆಲೆ ಕಾರ್ಯಕ್ರಮಗಳಲ್ಲಿ 30ಕ್ಕಿಂತ ಹೆಚ್ಚು ಜನ … Continue reading VIDEO| ಡಿಸಿ ಆದೇಶಕ್ಕೂ ಕ್ಯಾರೆ ಎನ್ನದ ಮಂಡ್ಯ ತಹಸೀಲ್ದಾರ್, ತಡರಾತ್ರಿವರೆಗೂ ಭರ್ಜರಿ ಪಾರ್ಟಿ!