More

    ಸೀಮೆಎಣ್ಣೆ ಸುರಿದುಕೊಂಡು ವಿಧಾನಸೌಧ ಮುಂಭಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

    ಬೆಂಗಳೂರು: ಖಾಸಗಿ ಬ್ಯಾಂಕ್ ನಿಂದ ನಿರಂತರ ಕಿರುಕುಳ ತಾಳಲಾರದೆ ಸೀಮೆಎಣ್ಣೆ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆ ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲೇ ನಡೆದಿದೆ.

    ಬುಧವಾರ 11. 45 ಗಂಟೆಗೆ ವಿಧಾನಸೌಧ ಮೂರನೇ ಗೇಟ್ ಬಳಿ ಈ ಘಟನೆ ನಡೆದಿದೆ. ಕುಟುಂಬ ಸಮೇತ ಬಂದ ಶಾಹಿಸ್ತ ಬಾನು ಎಂಬುವವರು ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು‌ ಅವರನ್ನು ವಶಕ್ಕೆ ಪಡೆದುಕೊಂಡರು.

    ತಕ್ಷಣವೇ ಮಧ್ಯೆ ಪ್ರವೇಶಿಸಿದ ಪೊಲೀಸರು ಸಂತ್ರಸ್ತ ಕುಟುಂಬವನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಸಮಯ ಪ್ರಜ್ಞೆ ಮತ್ತು ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಅನಾಹುತ ತಪ್ಪಿದೆ.

    ಜೆಜೆ ನಗರದ ಶಾಯಿಸ್ತಾ ದಂಪತಿ ಬ್ಯಾಂಕ್‌ನಿಂದ ಸಾಲಪಡೆದಿದ್ದರು. ಸಾಲ ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್​ನವರು ಜಮೀನು ಹರಾಜು ಹಾಕಿದ್ದರು. ಇದರಿಂದ ಮನನೊಂದು ​​ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೆ ದಂಪತಿಯನ್ನು ತಡೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts