ಹಸುವಿಗೆ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು! ಹಿಂದು ಕಾರ್ಯಕರ್ತನ ಎದೆಗೆ ಕೋವಿ ಇಟ್ಟು ಪರಾರಿ

ಮಡಿಕೇರಿ: ಗೋವನ್ನು ಸಾಕ್ಷಾತ್​ ದೇವರೆಂದು ಪೂಜಿಸುವ ನಾಡಿನಲ್ಲಿ ದುಷ್ಕರ್ಮಿಗಳು ರಾತ್ರೋರಾತ್ರಿ ಹಸುವಿಗೆ ಗುಂಡಿಕ್ಕಿ ಕೊಂದಿದ್ದಾರೆ. ಇಂತಹ ಅಮಾನವೀಯ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ವಿಷಯ ತಿಳಿದು ಹಿಂದು ಜಾಗರಣ ವೇದಿಕೆಯ 50ಕ್ಕೂ ಹೆಚ್ಚು ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿದರು. ಈ ವೇಳೆ ತಂಡದ ಮುಂಚೂಣಿ ಕಾರ್ಯಕರ್ತನ ಎದೆಗೆ ಕೋವಿಯಿಟ್ಟು ಬೆದರಿಸಿದ ದುಷ್ಕರ್ಮಿಗಳು ಕತ್ತಲೆಯಲ್ಲಿ ಪರಾರಿಯಾಗಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕಾಗಮಿಸಿ, ಗೋಮಾಂಸ ವಶಪಡಿಸಿಕೊಂಡಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. … Continue reading ಹಸುವಿಗೆ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು! ಹಿಂದು ಕಾರ್ಯಕರ್ತನ ಎದೆಗೆ ಕೋವಿ ಇಟ್ಟು ಪರಾರಿ