ವಿಜಯವಾಣಿ ಸುದ್ದಿಜಾಲ ಧಾರವಾಡ
ಧಾರವಾಡ ಲೋಕಸಭಾ ಮತೇತ್ರದಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ಹೀಗಾಗಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿ ಮತದಾನವು ಸುಗಮ ಮತ್ತು ಮುಕ್ತವಾಗಿ ನಡೆಸಲು ಮೇ 5ರ ಸಂಜೆ 6 ಗಂಟೆಯಿಂದ ಮೇ 8ರ ಸಂಜೆ 6ರವರೆಗೆ ಸಿಆರ್ಪಿಸಿ 1973ರ ಕಲಂ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರಡಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ.
ನವಲಗುಂದ, ಕುಂದಗೋಳ, ಧಾರವಾಡ (71), ಹು&ಧಾ ಪೂರ್ವ, ಹು&ಧಾ ಸೆಂಟ್ರಲ್, ಹು&ಧಾ ಪಶ್ಚಿಮ, ಕಲಟಗಿ ವಿಧಾನಸಭಾ ಮತೇತ್ರಗಳಲ್ಲಿ ಆದೇಶ ಜಾರಿಯಲ್ಲಿರಲಿದೆ. ಮತದಾನ ದಿನದಂದು ಅಹಿತಕರ ಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಮತ್ತು ಮತದಾನದ ಪ್ರಾವಿತ್ರ್ಯತೆ ಕಾಪಾಡಲು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆ ಹಾಗೂ ಎಲ್ಲ ಸಹಾಯಕ ಚುನಾವಣಾಧಿಕಾರಿ, ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕ್ರಮ ಜರುಗಿಸಲಾಗುವುದು. ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿ, ಪೊಲೀಸ್ ಅಧಿಕಾರಿಗಳಿಗೆ, ಚುನಾವಣಾ ಕಾರ್ಯನಿರತ ಸಿಬ್ಬಂದಿ, ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.