ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹ: ಶಿಗ್ಗಾವಿಯಲ್ಲಿ ಬೃಹತ್​ ಪ್ರತಿಭಟನೆ, ಸಿಎಂ ಮನೆಯತ್ತ ಹೊರಟ ಮೆರವಣಿಗೆ

ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಶಿಗ್ಗಾವಿಯಲ್ಲಿ ಬೃಹತ್​ ಪ್ರತಿಭಟನೆ ನಡೆಯುತ್ತಿದೆ. ಶಿಗ್ಗಾವಿಯ ಚನ್ನಮ್ಮ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಮಾಜದ ಬಾಂಧವರು ಜಮಾಯಿಸಿದ್ದಾರೆ. ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಲಾಯಿತು. ಮಾಜಿ ಸಚಿವ ವಿನಯ್ ಕುಲಕರ್ಣಿ, ಮಾಜಿ ಶಾಸಕ ವಿಜಯಾನಂದ ಕಾಶೆಪ್ಪನವರ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದಾರೆ. ಚನ್ನಮ್ಮ ವೃತ್ತದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದತ್ತ ಪ್ರತಿಭಟನಾ … Continue reading ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹ: ಶಿಗ್ಗಾವಿಯಲ್ಲಿ ಬೃಹತ್​ ಪ್ರತಿಭಟನೆ, ಸಿಎಂ ಮನೆಯತ್ತ ಹೊರಟ ಮೆರವಣಿಗೆ