ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಬಯೋಪಿಕ್ ‘ಭಾರತ ಸಿಂಧೂರಿ’ ಟೈಟಲ್ನಲ್ಲಿ ಸಿನಿಮಾ ಆಗಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ರೋಹಿಣಿ ಪಾತ್ರವನ್ನ ಯಾರು ನಿರ್ವಹಿಸ್ತಾರೆ ಎಂಬುದಕ್ಕೆ ಅಕ್ಷತಾ ಪಾಂಡವಪುರ ಅವರ ಹೆಸರು ಫೈನಲ್ ಆಗಿದೆ ಎಂಬುದೂ ಇತ್ತೀಚೆಗೆ ಬಹಿರಂಗವಾಯ್ತು. ಇದೀಗ ಈ ಸಿನಿಮಾ ರಿಲೀಸ್ ಆದ ಕೂಡಲೇ ಶಾಸಕ ಸಾ.ರಾ.ಮಹೇಶ್ ಅವರೂ ಐಎಎಸ್ ಅಧಿಕಾರಿಯೊಬ್ಬರ ಸಾವಿನ ಕುರಿತು ಒಂದು ಸಿನಿಮಾ ನಿರ್ಮಾಣ ಮಾಡ್ತೀನಿ ಎನ್ನುವ ಮೂಲಕ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದರು.
‘ರೋಹಿಣಿ ಸಿಂಧೂರಿ ಬಗ್ಗೆ ಸಿನಿಮಾ ಮಾಡುತ್ತಿದ್ದಾರಂತೆ. ಮಾಡಲಿ ಬಿಡಿ. ಇವರ ಸಿನಿಮಾ ರಿಲೀಸ್ ಆದ ಮೇಲೆ ಕರ್ನಾಟಕದ ರೈತನೊಬ್ಬನ ಮಗ, ಊಟ ತಿಂಡಿಗೂ ಕಷ್ಟಪಟ್ಟು ಐಎಎಸ್ ಮಾಡಿದವನ ಜೀವನ ಚರಿತ್ರೆ, ಒಬ್ಬ ಆಂಧ್ರದ ವ್ಯಕ್ತಿಯ ಸಹವಾಸ… ಜೀವನ ಏನಾಯ್ತು ಅಂತ 2015ರ ಏಪ್ರಿಲ್ 14ರ ಸಿಬಿಐ ವರದಿ ಆಧಾರಿಸಿ ನಾವೂ ಒಂದು ಸಿನಿಮಾ ಮಾಡ್ತೀವಿ’ ಎನ್ನುವ ಮೂಲಕ ಪರೋಕ್ಷವಾಗಿ ಐಎಎಸ್ ಅಧಿಕಾರಿ ದಿ. ಡಿ.ಕೆ. ರವಿ ಸಾವಿನ ಬಗ್ಗೆ ಸಾ.ರಾ.ಮಹೇಶ್ ಪ್ರಸ್ತಾಪಿಸಿದರು. ಹಾಗಾದರೆ ಡಿಕೆ ರವಿ ಅವರ ಪಾತ್ರವನ್ನ ಯಾರು ಮಾಡ್ತಾರೆ ಎಂದು ತಿಳಿದುಕೊಳ್ಳುವ ಕುತೂಹಲ ನಾಡಿನ ಬಹುತೇಕರಲ್ಲಿ ದಟ್ಟವಾಗಿದೆ. ಈ ನಡುವೆ ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ, ಬಿಗ್ಬಾಸ್ ಸೀಸನ್-8ರ ಸ್ಪರ್ಧಿ ಆದ ಚಕ್ರವರ್ತಿ ಚಂದ್ರಚೂಡ್ ಅವರು ದಿವಂಗತ ಐಎಎಸ್ ಅಧಿಕಾರಿ ಡಿ.ಕೆ. ರವಿ ಪಾತ್ರದಲ್ಲಿ ಅಭಿನಯಿಸಲು ಆಫರ್ ಸಿಕ್ಕಿದೆ ಎಂದು ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿರಿ ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
”ಸಾ ರಾ ಮಹೇಶೂ ಡಿಕೆರವಿ ಪಿಕ್ಚರ್ ತಗೀತಾರಂತೆ -ಇತ್ತ ರೋಹಿಣಿ ಸಿಂಧೂರಿ ಸಿನಿಮಾ ಘೋಷಣೆಯಾಗಿದೆ. ನಿನ್ನೆ ಹೊಸ ಡೈರೆಕ್ಟರೊಬ್ಬರು ಡಿಕೆ ರವಿ ಪಾತ್ರ ಮಾಡ್ತೀರಾ ಅಂತ ಕೇಳಿದ್ರು. ಎರಡು ಕಂಡಿಷನ್ ಹಾಕಿದೀನಿ. ಆ 37 ಮೆಸೇಜ್ ತೋರಿಸ್ತೀರಾ ಸಿನಿಮಾದಲ್ಲಿ? ಇನ್ನೊಂದು bxjwoaabxಹೊಝಖಿಧಟಿ#*%833 (ದುಡ್ಡಲ್ಲ). ನೋಡಣ …ಮುಂದಾ…” ಎಂದು ಚಕ್ರವರ್ತಿ ಚಂದ್ರಚೂಡ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
2020ರ ಜೂನ್ 15ರಂದೇ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಭಾರತ ಸಿಂಧೂರಿ’ ಸಿನಿಮಾ ಟೈಟಲ್ ರಿಜಿಸ್ಟರ್ ಆಗಿದೆ. ಲಾಕ್ಡೌನ್ ನಂತರ ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಫಿಲಂಸ್ ಬ್ಯಾನರ್ ಅಡಿ ಈ ಸಿನಿಮಾ ಸೆಟ್ಟೇರಲಿದ್ದು, ಕಥೆ, ಚಿತ್ರಕಥೆ, ಸಾಹಿತ್ಯ, ರಚನೆ, ನಿರ್ದೇಶನದ ಜವಾಬ್ದಾರಿಯನ್ನು ಮಂಡ್ಯದ ಪತ್ರಕರ್ತ ಕೃಷ್ಣ ಸ್ವರ್ಣಸಂದ್ರ ಹೊತ್ತಿದ್ದಾರೆ.
ಬೈಕ್ ಮೇಲಿದ್ದ ಹೆಲ್ಮೆಟ್ ನುಂಗಿದ ಆನೆ! ಪಾಪ ಹಸಿವಾಗಿತ್ತೇನೋ… ಸಖತ್ ವೈರಲ್ ಆಗ್ತಿದೆ ಈ ವಿಡಿಯೋ
ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್ನೋಟ್ನಲ್ಲಿದೆ ಸಾವಿನ ರಹಸ್ಯ
ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ
ರೋಹಿಣಿ ಸಿಂಧೂರಿ ಬಯೋಪಿಕ್ ರಿಲೀಸ್ ಆಗುತ್ತಿದ್ದಂತೆ ಸಾ.ರಾ.ಮಹೇಶ್ ಒಂದು ಸಿನಿಮಾ ಮಾಡ್ತಾರಂತೆ!