ಬೆಂಗಳೂರು: ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಮಾಡಿದ್ದ ಗಂಭೀರ ಆರೋಪಕ್ಕೆ ಡಿಕೆಶಿ ಮಾತಿನಲ್ಲೇ ತಿರುಗೇಟು ಕೊಟ್ಟಿದ್ದಾರೆ.
ಮೊದಲು ಅವರನ್ನ ಮೆಂಟಲ್ ಆಸ್ಪತ್ರೆಗೆ ಸೇರಿಸಿ. ಯಾವುದಾದರೂ ಆಸ್ತಿ ಇದ್ದರೆ ಅವನೇ ಮಾಡ್ಕೊಳ್ಳಿ. ಅವನಿಗೇ ಅದನ್ನು ಗಿಫ್ಟ್ ಕೊಟ್ಟು ಬಿಡ್ತೀನಿ. ರಾಜಕೀಯವಾಗಿ ಅವನಿಗೆ ಜಾಗ ಇಲ್ಲ. ಹೀಗಾಗಿ ಮಾತಾಡ್ತಿದ್ದಾನೆ. ಮೆಂಟಲ್ ಆಸ್ಪತ್ರೆಯಲ್ಲಿ ಇರಬೇಕಾದವರು ಮಾತಾಡ್ತಿದ್ದಾರೆ. ಅವರ ಬಗ್ಗೆ ನಾನು ಮಾತನಾಡಲ್ಲ ಎಂದು ಡಿಕೆಶಿ ಕಿಡಿಕಾರಿದ್ದಾರೆ.
ಸೊಗಡು ಶಿವಣ್ಣ ಏನು ಹೇಳಿದ್ದರು?: ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಹೆಸರಲ್ಲಿ ಡಿಕೆಶಿ ಅವರು ಬೇನಾಮಿ ಜಮೀನು ಖರೀದಿ ಮಾಡಿದ್ದಾರೆ ಎಂದು ತುಮಕೂರಲ್ಲಿ ಸೊಗಡು ಶಿವಣ್ಣ ಹೇಳಿದ್ದರು. ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆಗಬೇಕು. ಪಾವಗಡ ಸೋಲಾರ್ ಪಾರ್ಕ್ನಲ್ಲಿ ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿದೆ. ಡಿಕೆಶಿ ಅಲಿಬಾಬಾ ಗ್ಯಾಂಗಿನ ಡಕಾಯತಿ. ಈ ಡಾಕಾಯತನಿಗೆ ಇತರ 4೦ ಜನ ಕಳ್ಳರು ಸಪೋರ್ಟ್ ಮಾಡ್ತಿದ್ದಾರೆ ಎಂದು ಸೊಗಡು ಶಿವಣ್ಣ ಲೇವಡಿ ಮಾಡಿದ್ದರು.
ಬೇಯಿಸಿದ ಮೊಟ್ಟೆ ತಿಂದು ಪ್ರಾಣಬಿಟ್ಟ ಮಹಿಳೆ! ಮೊಟ್ಟೆ ಪ್ರಿಯರನ್ನ ಬೆಚ್ಚಿಬೀಳಿಸುತ್ತೆ ಈ ಘಟನೆ