ಕೋಲಾರ: ವರದಕ್ಷಿಣೆ ಕಿರುಕುಳ ಸಹಿಸಲಾಗದೆ ಗೃಹಿಣಿಯೊಬ್ಬರು 3 ವರ್ಷದ ಮಗುವನ್ನು ನೀರಿನ ಸಂಪಿಗೆ ನೂಕಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂದ ಅಮಾನವೀಯ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ಸಂಭವಿಸಿದೆ.
ಮುಳಬಾಗಿಲು ತಾಲೂಕಿನ ಪಿಚ್ಚಗುಂಟ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ದೊಡ್ಡತಮ್ಮನಹಳ್ಳಿ ಗ್ರಾಮದ ಚೈತ್ರಾ(25) ಮತ್ತು ಈಕೆಯ ಮಗು ಚಾರ್ವಿತ್ ಗೌಡ ಮೃತರು. 3 ವರ್ಷದ ಹಿಂದೆ ಅಂದ್ರೆ 2018ರಲ್ಲಿ ಕೋಲಾರ ತಾಲೂಕಿನ ಪುರಹಳ್ಳಿ ಗ್ರಾಮದ ಶ್ರೀನಾಥ್ ಎಂಬಾತನ ಜತೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಆಲಂಬಗಿರಿ ದೇವಾಲಯದಲ್ಲಿ ಚೈತ್ರಾಳ ಮದುವೆ ಮಾಡಿದ್ದರು.
ಮದುವೆ ಆದಾಗಿನಿಂದ ಗಂಡನ ಕುಟುಂಬಸ್ಥರು ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರಂತೆ. ಇದೇ ವಿಚಾರವಾಗಿ 3 ಬಾರಿ ಪಂಚಾಯಿತಿ ನಡೆದಿತ್ತಾದರೂ ಅವರ ಕಿರುಕುಳ ನಿಂತಿರಲಿಲ್ಲ. ಚೈತ್ರಾಳ ಮಾವ-ಅತ್ತೆ, ನಾದಿನಿ, ಮೈದುನ ಸೇರಿ ಎಲ್ಲರೂ ವರದಕ್ಷಿಣೆ ತರುವಂತೆ ಹಿಂಸಿಸುತ್ತಿದ್ದರು ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಸಾವಿಗೂ ಮುನ್ನ ಚೈತ್ರಾ, ಡೆತ್ನೋಟ್ ಬರೆದಿಟ್ಟು ಸಾವಿಗೆ ಕಾರಣ ಯಾರೆಂದು ಬರೆದಿದ್ದಾಳೆ ಎಂದು ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಸೆಮಣೆ ಏರಿದ 65 ವರ್ಷದ ಮೈಸೂರಿನ ವೃದ್ಧಜೋಡಿ: 35 ವರ್ಷದ ಬಳಿಕ ಪ್ರಿಯಕರನ ಸೇರಿದ ಪ್ರೇಯಸಿ
ನಾನು ಇರೋವರೆಗೂ ರಂಗನಾಥ್ ಅವರೇ ಕುಣಿಗಲ್ನ ಕಾಂಗ್ರೆಸ್ ಅಭ್ಯರ್ಥಿ ಎಂದ ಡಿಕೆಸು ವಿರುದ್ಧ ಎಸ್ಪಿಎಂ ಗರಂ
ಪ್ರೇಯಸಿಯ ಅಂತ್ಯಕ್ರಿಯೆ ನಡೆದ ಸ್ಥಳದಲ್ಲೇ ಪ್ರಿಯಕರ ಆತ್ಮಹತ್ಯೆ! ತಡರಾತ್ರಿ ರುದ್ರಭೂಮಿಯಲ್ಲಿ ನಡೀತು ಹೃದಯವಿದ್ರಾವಕ ಘಟನೆ
ನಾನು ದೆಹಲಿಗೆ ಹೋದಾಗ ನನಗ್ಯಾರೂ ಒಂದು ಗ್ಲಾಸ್ ಕಾಫಿ ಕೊಡಲಿಲ್ಲ: ದೇವೇಗೌಡ