More

    ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ: ಸ್ಥಳದಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ-ಗೆಳತಿ ದುರ್ಮರಣ

    ಆನೇಕಲ್: ಸರ್ಜಾಪುರ-ಬೆಂಗಳೂರು ಮುಖ್ಯರಸ್ತೆಯಲ್ಲಿ ಮರಕ್ಕೆ ಡುಕಾಟಿ ಬೈಕ್​ ಡಿಕ್ಕಿ ಹೊಡೆದು ನಿವೃತ್ತ ಪೊಲೀಸ್​ ಅಧಿಕಾರಿ ಗುರುಪ್ರಸಾದ್​ ಅವರ ಮಗ ಮತ್ತು ಈತನ ಗೆಳತಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

    ಬೆಂಗಳೂರಿನ ಮಾರತಹಳ್ಳಿ ಮೂಲದ ಗಗನ್ ದೀಪ್ ಗಗನ್ ಮತ್ತು ಬನಶಂಕರಿಯ ಯಶಸ್ವಿನಿ ಮೃತ ದುರ್ದೈವಿಗಳು. ಸರ್ಜಾಪುರದ ಪ್ರೆಸ್ಟೀಜ್ ಕಂಪನಿಯಲ್ಲಿ ಇವರಿಬ್ಬರೂ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಿಂದ ಸರ್ಜಾಪುರಕ್ಕೆ ಬೈಕ್​ನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಶುಕ್ರವಾರ ಬೆಳಗಿನ ಜಾವ 3ರ ಸಮಯದಲ್ಲಿ ರಸ್ತೆಬದಿಯ ಮರಕ್ಕೆ ಬೈಕ್​ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಗಗನ್​ದೀಪ್​ರ ಮುಖ ನಜ್ಜುಗುಜ್ಜಾಗಿದೆ. ಇಬ್ಬರ ಮೃತದೇಹಗಳನ್ನು ಆಕ್ಸ್​ಫರ್ಡ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

    ತಂದೂರಿ ಚಿಕನ್ ಸೇವಿಸಿದ ದ್ವಿತೀಯ ಪಿಯು ವಿದ್ಯಾರ್ಥಿ ಸಾವು

    ಬೆಂಗಳೂರಲ್ಲಿ ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ: ಸಾವಿಗೂ ಮುನ್ನ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ Sorry… ಎಂದು ಬರೆದಿದ್ದೇಕೆ?

    ಹೆತ್ತ ತಾಯಿಯ ಜುಟ್ಟು ಹಿಡಿದು ಕೊಟ್ಟು ಬಿಡುತ್ತೇವೆ… ಪಠ್ಯ ವಾಪಸ್​ ಅಭಿಯಾನಕ್ಕೆ ಟಾಂಗ್​ ಕೊಟ್ಟ ಎಸ್.ಎಲ್.ಭೈರಪ್ಪ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts