ಆನೇಕಲ್: ಸರ್ಜಾಪುರ-ಬೆಂಗಳೂರು ಮುಖ್ಯರಸ್ತೆಯಲ್ಲಿ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ ಹೊಡೆದು ನಿವೃತ್ತ ಪೊಲೀಸ್ ಅಧಿಕಾರಿ ಗುರುಪ್ರಸಾದ್ ಅವರ ಮಗ ಮತ್ತು ಈತನ ಗೆಳತಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಬೆಂಗಳೂರಿನ ಮಾರತಹಳ್ಳಿ ಮೂಲದ ಗಗನ್ ದೀಪ್ ಗಗನ್ ಮತ್ತು ಬನಶಂಕರಿಯ ಯಶಸ್ವಿನಿ ಮೃತ ದುರ್ದೈವಿಗಳು. ಸರ್ಜಾಪುರದ ಪ್ರೆಸ್ಟೀಜ್ ಕಂಪನಿಯಲ್ಲಿ ಇವರಿಬ್ಬರೂ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಿಂದ ಸರ್ಜಾಪುರಕ್ಕೆ ಬೈಕ್ನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಶುಕ್ರವಾರ ಬೆಳಗಿನ ಜಾವ 3ರ ಸಮಯದಲ್ಲಿ ರಸ್ತೆಬದಿಯ ಮರಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಗಗನ್ದೀಪ್ರ ಮುಖ ನಜ್ಜುಗುಜ್ಜಾಗಿದೆ. ಇಬ್ಬರ ಮೃತದೇಹಗಳನ್ನು ಆಕ್ಸ್ಫರ್ಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಹೆತ್ತ ತಾಯಿಯ ಜುಟ್ಟು ಹಿಡಿದು ಕೊಟ್ಟು ಬಿಡುತ್ತೇವೆ… ಪಠ್ಯ ವಾಪಸ್ ಅಭಿಯಾನಕ್ಕೆ ಟಾಂಗ್ ಕೊಟ್ಟ ಎಸ್.ಎಲ್.ಭೈರಪ್ಪ