More

    ದುಬಾರಿ ಟೊಮ್ಯಾಟೊಗೆ ಗೌರಿಬಿದನೂರಲ್ಲಿ ಇಬ್ಬರು ಬಲಿ! ತೋಟದಲ್ಲೇ ನಡೀತು ಘೋರ ಕೃತ್ಯ, ಇಲ್ಲಿ ಯಾರದ್ದು ತಪ್ಪು?

    ಚಿಕ್ಕಬಳ್ಳಾಪುರ: ಟೊಮ್ಯಾಟೊ ತೋಟಕ್ಕೆ ರೈತರೊಬ್ಬರು ಅಳವಡಿಸಿದ್ದ ವಿದ್ಯುತ್​ ಬೇಲಿಗೆ ಯುವಕನೊಬ್ಬ ಬಲಿಯಾಗಿದ್ದು, ಸಿಟ್ಟಿಗೆದ್ದ ಮೃತನ ಕುಟುಂಬಸ್ಥರು ತೋಟದ ಮಾಲೀಕನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿ ಸಾಯಿಸಿದ ಅಮಾನವೀಯ ಘಟನೆ ಗೌರಿಬಿದನೂರು ತಾಲೂಕಿನ ಚಿರಕಮಟ್ಟೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

    ಚಿರಕಮಟ್ಟೇನಹಳ್ಳಿ ಗ್ರಾಮದಲ್ಲಿ ಚಿಕ್ಕಹುಸೇನಪುರ ಗ್ರಾಮದ ರೈತ ಅಶ್ವತ್ಥರಾವ್ ಎಂಬುವರಿಗೆ ಸೇರಿದ ಜಮೀನಿದೆ. ಇದರಲ್ಲಿ ಅಶ್ವತ್ಥರಾವ್​ ಟೊಮ್ಯಾಟೊ ಬೆಳೆದಿದ್ದಾರೆ. ಟೊಮ್ಯಾಟೊ ದರ ಹೆಚ್ಚಾಗಿದ್ದರಿಂದ ಬೆಳೆ ರಕ್ಷಣೆಗೆಂದು ವಿದ್ಯುತ್​ ಬೇಲಿ ಅಳವಡಿಸಿಕೊಂಡಿದ್ದರು. ಆದರೆ ಇದು ಅಕ್ರಮವಾಗಿ ಅಳವಡಿಸಿಕೊಂಡದ್ದು ಎನ್ನಲಾಗಿದೆ. ಬುಧವಾರ ರಾತ್ರಿ ಚಿರಕಮಟ್ಟೇನಹಳ್ಳಿ ಗ್ರಾಮದ ಯುವ ರೈತ ವಸಂತರಾವ್(29) ಎಂಬುವರು ವಿದ್ಯುತ್​ ಬೇಲಿಯ ಅರಿವಿಲ್ಲದೆ ಆಕಸ್ಮಿಕವಾಗಿ ಟೊಮ್ಯಾಟೊ ತೋಟಕ್ಕೆ ಹೋಗಿದ್ದು, ಈ ವೇಳೆ ವಿದ್ಯುತ್​ ಪ್ರವಹಿಸಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ವಸಂತರಾವ್​ನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮೃತನ ಕುಟುಂಬಸ್ಥರು ಮತ್ತು ಸಂಬಂಧಿಕರು ರೊಚ್ಚಿಗೆದ್ದು ಗುರುವಾರ ಬೆಳಗ್ಗೆ ತೋಟದ ಮಾಲೀಕ ಅಶ್ವತ್ಥರಾವ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಅಶ್ವತ್ಥರಾವ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾವಾಗಿದೆ. ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

    ಟೆಕ್ಕಿ ಜತೆ ರಿಸೆಪ್ಷನ್​ ಮಾಡ್ಕೊಂಡ ಚನ್ನಪಟ್ಟಣ ವಧು: ಮಧ್ಯರಾತ್ರಿ ಆಕೆ ಮಾಡಿದ ಕೆಲ್ಸಕ್ಕೆ ಮದ್ವೆಯೇ ಮುರಿದು ಬಿತ್ತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts