More

    ಬೇಲೂರಿನಲ್ಲಿ ಬೆಳ್ಳಂಬೆಳಗ್ಗೆ ಒಂಟಿ ಸಲಗ ದಾಳಿ: ಇಬ್ಬರು ಕೂಲಿ ಕಾರ್ಮಿಕರ ಸಾವು

    ಹಾಸನ: ಬೇಲೂರು ತಾಲೂಕಿನ ಕಡೇಗರ್ಜೆ ಗ್ರಾಮದಲ್ಲಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ಕಾರ್ಮಿಕರಿಬ್ಬರು ಬಲಿಯಾಗಿದ್ದಾರೆ.

    ಕಡೆಗರ್ಜೆ ಗ್ರಾಮದ ಚಿಕ್ಕಯ್ಯ(50) ಮತ್ತು ಹೀರಯ್ ಎಂಬುವರ ಪುತ್ರ ಚಿಕ್ಕಯ್ಯ(52) ಮೃತ ದುರ್ದೈವಿಗಳು. ಮೃತ ಇಬ್ಬರ ಹೆಸರೂ ಚಿಕ್ಕಯ್ಯ. ಕಡೆಗರ್ಜೆ ಮನೆ ಸಮೀಪದ ತೋಟದಲ್ಲಿ ಕೆಲಸಕ್ಕೆಂದು ಇವರಿಬ್ಬರು ಇಂದು(ಶುಕ್ರವಾರ) ಬೆಳಗ್ಗೆ ತೆರಳುತ್ತಿದ್ದರು. ಈ ವೇಳೆ ದಾಳಿ ಮಾಡಿದ ಒಂಟಿ ಸಲಗ, ಕೂಲಿ ಕಾರ್ಮಿಕರನ್ನು ತುಳಿದು ಸಾಯಿಸಿದೆ.

    ಗುಂಪಿನಿಂದ ತಪ್ಪಿಸಿಕೊಂಡು ಬಂದು ಊರ ಸಮೀಪ ಬೀಡುಬಿಟ್ಟಿರುವ ಒಂಟಿ ಸಲಗ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಅಧಿಕಾರಿಗಳು ಸೂಕ್ತ ಕೈಗೊಂಡಿದ್ದರೆ ಕಾರ್ಮಿಕರಿಬ್ಬರ ಪ್ರಾಣ ಉಳಿಯುತ್ತಿತ್ತು ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಮೇಲಧಿಕಾರಿಗಳು ಬರಬೇಕೆಂದು ಆಗ್ರಹಿಸಿ ಸ್ಥಳೀಯರು ರಸ್ತೆಯಲ್ಲಿ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

    ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ರೆ ವಿಷಾದಿಸುವೆ… ಮಾಜಿ ಶಾಸಕರಿಗೆ ಪತ್ರ ಬರೆದು ಕ್ಷಮೆ ಕೋರಿದ ಡಿಕೆಶಿ

    ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

    ತುಮಕೂರು ಮಾಜಿ ಕಾರ್ಪೋರೇಟರ್​ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts