ಲಕ್ನೋ: ಭಾನುವಾರ ತಡರಾತ್ರಿ ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡ ಮನೆಯಲ್ಲಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ
ಬಟ್ಟೆ ವ್ಯಾಪಾರಿ ರಿಯಾಜ್ ಅಲಿಯಾಸ್ ರಿಯಾಜುದ್ದೀನ್ ಮನೆಗೆ ನುಗ್ಗಿದ ಅಪರಿಚಿತರ ಗುಂಪೊಂದು ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ. ದುಷ್ಕರ್ಮಿಗಳ ಗುಂಡೇಟಿಗೆ ರಿಯಾಜ್, ಇವರ ಮಕ್ಕಳಾದ ಅಜ್ಜು ಮತ್ತು ಇಮ್ರಾನ್ ಬಲಿಯಾಗಿದ್ದಾರೆ. ರಿಯಾಜ್ರ ಪತ್ನಿಗೂ ಗುಂಡೇಟು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿರಿ ಸಿಗಂದೂರು ಲಾಂಚ್ನಿಂದ ನದಿಗೆ ಹಾರಿದ ಮಹಿಳೆ! ಸಾಯಲೆಂದೇ ಬಂದವಳ ಜೀವ ಉಳಿದಿದ್ದೇಗೆ?
ಇಂತಹ ದುರ್ಘಟನೆ ಉತ್ತರಪ್ರದೇಶದ ಗಾಜಿಯಾಬಾದ್ನ ಲೋನಿ ಪ್ರದೇಶದ ಟೋಲಿ ಕಾಲನಿಯಲ್ಲಿ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.
ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!
ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ
ಕದಿರೇಶ್ನನ್ನು ಪತ್ನಿ ರೇಖಾಳೇ ಕೊಲ್ಲಿಸಿದ್ದಾ? ರೇಖಾ ಹಂತಕ ಪೀಟರ್ ಬಾಯ್ಬಿಟ್ಟ ಸ್ಫೋಟಕ ರಹಸ್ಯ ಇಲ್ಲಿದೆ