More

    ನನ್ನನ್ನು ಹೊರ ಕಳುಹಿಸಿ ತಾಯಿಯನ್ನು ಕರೆದು… ಖ್ಯಾತ ನಿರ್ದೇಶಕನ ಮುಖವಾಡ ಕಳಚಿದ ನಟಿ ಯಶಿಕಾ!

    ಚೆನ್ನೈ: ಈಗಾಗಲೇ ಸಾಕಷ್ಟು ನಟಿಯರು ಸಿನಿಮಾ ಇಂಡಸ್ಟ್ರಿಯಲ್ಲಿ ನಡೆಯುವ ಕಾಸ್ಟಿಂಗ್​ ಕೌಚ್​ ಬಗ್ಗೆ ಮಾತನಾಡಿದ್ದಾರೆ. ನಿರ್ದೇಶಕರು, ನಟರು ಹಾಗೂ ನಿರ್ಮಾಪಕರು ಅವಕಾಶದ ಹೆಸರಿನಲ್ಲಿ ತಮ್ಮ ಬಯಕೆಗಳನ್ನು ಈಡೇರಿಸುವಂತೆ ನಟಿಯರನ್ನು ಕೇಳುವುದು ಸಿನಿ ಇಂಡಸ್ಟ್ರಿಗೆ ಅಂಟಿಕೊಂಡಿರುವ ಶಾಪವಾಗಿದೆ. ಬಾಲಿವುಡ್​, ಟಾಲಿವುಡ್​, ಕಾಲಿವುಡ್​, ಸ್ಯಾಂಡಲ್​ವುಡ್​ ಮತ್ತು ಮಾಲಿವುಡ್​ನಲ್ಲಿ ನಡೆಯುವ ಕಾಸ್ಟಿಂಗ್​ ಕೌಚ್​ಗೆ ಅನೇಕ ಕಲಾವಿದೆಯರು ಸಂತ್ರಸ್ತೆಯರಾಗಿದ್ದಾರೆ. ಇನ್ನು ಕೆಲವರು ಅದನ್ನು ಎದುರಿಸಿದ್ದಾರೆ. ಸಾಕಷ್ಟು ನಟಿಯರು ತಮ್ಮ ಕಹಿ ಅನುಭವಗಳನ್ನು ಧೈರ್ಯವಾಗಿ ಹೇಳಿಕೊಂಡಿದ್ದು, ಇದೀಗ ಆ ಸಾಲಿಗೆ ಮತ್ತೊಬ್ಬ ತಮಿಳು ನಟಿ ಯಶಿಕಾ ಆನಂದ್​ ಸೇರಿಕೊಂಡಿದ್ದಾರೆ.

    ಕಾಲಿವುಡ್​ನ “ಇರುಟ್ಟು ಅರಯಿಲ್ ಮುರಟ್ಟು ಕುತ್ತು” ಹೆಸರಿನ ವಯಸ್ಕರ ಕಾಮಿಡಿ ಚಿತ್ರ ಹಾಗೂ ಬಿಗ್​ಬಾಸ್​ ಶೋ ಮೂಲಕ ಖ್ಯಾತಿ ಪಡೆದಿರುವ ನಟಿ ಯಶಿಕಾ ಆನಂದ್ ಅವರು ಕಳೆದ ವರ್ಷ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚೇತರಿಸಿಕೊಂಡಿದ್ದು, ಸಂಪೂರ್ಣ ಸಹಜ ಜೀವನಕ್ಕೆ ಮರಳಿದ್ದಾರೆ. ಸಾವಿನ ಹೊಸ್ತಿಲಿಗೆ ಹೋಗಿ ಅದೃಷ್ಟವಶಾತ್​ ಬದುಕಿ ಬಂದಿರುವ ಯಶಿಕಾ, ಹಿಂದಿನ ನೋವೆಲ್ಲ ಮರೆತು ಮತ್ತೆ ಗ್ಲಾಮರ್​ ಲೋಕದ ಕ್ಷಣಗಳನ್ನು ಸವಿಯುತ್ತಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಿದ್ದ ಯಶಿಕಾ, ಅಪಘಾತದ ನಂತರ ಸಾಕಷ್ಟು ದಿನಗಳ ಕಾಲ ಜಾಲತಾಣದಿಂದ ದೂರ ಉಳಿದಿದ್ದರು. ಸಂಪೂರ್ಣ ಗುಣಮುಖರಾಗಿ ಸಹಜ ಜೀವನಕ್ಕೆ ಮರಳಿರುವ ಯಶಿಕಾ ಜಾಲತಾಣದಲ್ಲಿ ಆ್ಯಕ್ಟೀವ್​ ಆಗಿದ್ದು, ಗ್ಲಾಮರಸ್​ ಫೋಟೋಗಳನ್ನು ಹರಿಬಿಡುವ ಸಂಚಲನ ಸೃಷ್ಟಿಸುತ್ತಿದ್ದಾರೆ. ಆಗಾಗ ಅಭಿಮಾನಿಗಳ ಜತೆ ಸಂವಹನವನ್ನು ನಡೆಸುತ್ತಿರುತ್ತಾರೆ. ಇದೀಗ ವೃತ್ತಿ ಜೀವನದ ಆರಂಭದಲ್ಲಿ ಎದುರಿಸಿದ ಕಹಿ ಅನುಭವವನ್ನು ಇತ್ತೀಚಿನ ಸಂದರ್ಶನವೊಂದರಲ್ಲಿ ಯಶಿಕಾ ಬಿಚ್ಚಿಟ್ಟಿದ್ದಾರೆ.

    ಪ್ರಖ್ಯಾತ ನಿರ್ದೇಶಕರು ನನ್ನನ್ನು ಆಡಿಷನ್​ಗೆಂದು ಕರೆದರು. ನನಗೆ ಸ್ಕ್ರೀನ್​ ಟೆಸ್ಟ್​ ಮಾಡಿದ ಬಳಿಕ ನನ್ನ ಫೋಟೋಗಳನ್ನು ತೆಗೆದುಕೊಂಡರು. ಇದಾದ ಬಳಿಕ ನನ್ನನ್ನು ಹೊರಗಿರುವಂತೆ ಹೇಳಿ ನನ್ನ ತಾಯಿಯೊಂದಿಗೆ ಮಾತನಾಡಿದರು. ನನಗೆ ಅವಕಾಶ ನೀಡಬೇಕಾದರೆ ನನ್ನ ತಾಯಿ ನಿರ್ದೇಶಕನೊಂದಿಗೆ ಮಲಬೇಕಿತ್ತಂತೆ. ಇದನ್ನು ಕೇಳಿ ನಾನು ಮಾನಸಿಕವಾಗಿ ಕುಗ್ಗಿದ್ದೆ. ನಾನು ಅವರ ಹೆಸರನ್ನು ಹೇಳಲು ಇಷ್ಟಪಡುವುದಿಲ್ಲ. ಏಕೆಂದರೆ, ಹೆಸರು ಬಹಿರಂಗವಾದರೆ ನನಗೆ ತೊಂದರೆಯಾಗುತ್ತದೆ ಎಂದು ಯಶಿಕಾ ಹೇಳಿದ್ದಾರೆ.

    ಇನ್ನು ಯಶಿಕಾ ಅವರ ಮೇಲೆ ಬಹಳ ವರ್ಷಗಳ ಹಿಂದೆ ಪೊಲೀಸ್​ ಸಿಬ್ಬಂದಿಯೊಬ್ಬರು ಅಸಭ್ಯವಾಗಿ ವರ್ತಿಸಿದ್ದರು. ಇದರ ವಿರುದ್ಧವೂ ಯಶಿಕಾ ಧ್ವನಿ ಎತ್ತಿ ದೂರು ಸಹ ದಾಖಲಿಸಿದ್ದರು.

    ಕಳೆದ ವರ್ಷ ಜುಲೈನಲ್ಲಿ ಮಧ್ಯರಾತ್ರಿ ಪಾರ್ಟಿ ಮುಗಿಸಿಕೊಂಡು ಬರುವಾಗ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯಶಿಕಾ ಆನಂದ್ ದೀರ್ಘ ಕಾಲ ಆಸ್ಪತ್ರೆಯಲ್ಲೇ ಉಳಿದು ಚಿಕಿತ್ಸೆ ಪಡೆಯಬೇಕಾಯಿತು. ಎದ್ದು ನಡೆದಾಡಲು ಸಹ ಅವರಿಗೆ ಆಗುತ್ತಿರಲಿಲ್ಲ. ಅಪಘಾತದಲ್ಲಿ ಯಶಿಕಾ ಅವರ ಆಪ್ತ ಸ್ನೇಹಿತೆ ವಲ್ಲಿಚೆಟ್ಟಿ ಭವಾನಿ ಅವರು ಸ್ಥಳದಲ್ಲೇ ಸಾವಿಗೀಡಾದರು. (ಏಜೆನ್ಸೀಸ್​)

    ಗುಪ್ತಾಂಗದ ಫೋಟೋ ಕಳುಹಿಸಿ ಎಂದವನಿಗೆ ಫೋಟೋವೊಂದನ್ನು ಸೆಂಡ್​ ಮಾಡಿ ಶಾಕ್​ ಕೊಟ್ಟ ಯಶಿಕಾ!

    ಪ್ರತಾಪ್​ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ: ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ಹೀಗಿದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts