ಕೊಪ್ಪಳ: ಮಾಜಿ ಸಚಿವ ವಿರೂಪಾಕ್ಷಪ್ಪ ಅಗಡಿ ಅವರು ಮಂಗಳವಾರ ಬೆಳಗ್ಗೆ ನಿಧನರಾದರು. ಇವರಿಗೆ 81 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವರು ಕೊಪ್ಪಳದ ಕಲ್ಯಾಣ ನಗರದ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಮೂವರು ಮಕ್ಕಳಿದ್ದಾರೆ.
1985-89ರವರೆಗೆ ಜನತಾ ಪಾರ್ಟಿಯ ಶಾಸಕರಾಗಿದ್ದ ವಿರೂಪಾಕ್ಷಪ್ಪ, ಎಸ್.ಆರ್. ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು. ಬೊಮ್ಮಾಯಿ ನೇತೃತ್ವದ ಸರ್ಕಾರ ಪತನವಾದ ಹಿನ್ನೆಲೆ ಒಂದು ವಾರ ಮಾತ್ರ ಸಚಿವರಾಗಿದ್ದರು. ಅದೇ ವರ್ಷ ನಡೆದ ಚುನಾವಣೆಯಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋಲುಂಡಿದ್ದರು. 1998ರಲ್ಲಿ ಲೋಕಶಕ್ತಿ ಪಕ್ಷದಿಂದ, 2004ರಲ್ಲಿ ಜೆಡಿಎಸ್ನಿಂದ ಲೋಕಸಭಾ ಚುನಾವಣೆಗ ಸ್ಪರ್ಧಿಸಿದ್ದರು. ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಸೋಲದೇವನಹಳ್ಳಿಯ ನಾಲ್ವರು ಮಕ್ಕಳು ಪತ್ತೆ: ಪೊಲೀಸರ ಬಳಿ ಮನದ ನೋವನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಮಕ್ಕಳು