More

    ತೊಂಡೂರ ಗ್ರಾಮದ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ

    ಸವಣೂರ: ಸಾಲಬಾಧೆಗೆ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಲ್ಲೇಶಪ್ಪ ತಿಪ್ಪಣ್ಣ ಕಾಳಪ್ಪನವರ (55) ಮೃತವ್ಯಕ್ತಿ. ರೈತ ಮಲ್ಲೇಶಪ್ಪ 4 ಎಕರೆ ಜಮೀನು ಹೊಂದಿದ್ದು, ಉಳುಮೆಗಾಗಿ ಹುರುಳಿಕುಪ್ಪಿ ಕೆವಿಜಿ ಬ್ಯಾಂಕಿನಲ್ಲಿ 2 ಲಕ್ಷ ರೂಪಾಯಿ ಸಾಲ ಹಾಗೂ ಪರಿಚಯಸ್ಥರಿಂದ 2 ಲಕ್ಷ ರೂ. ಸಾಲ ಪಡೆದಿದ್ದ ಎನ್ನಲಾಗಿದೆ. 4 ಎಕರೆ ಜಮೀನಿನಲ್ಲಿ ಬೆಳೆದಿದ್ದ ಗೋವಿನಜೋಳ ಕೈಗೆ ಬಾರದ ಹಿನ್ನೆಲೆಯಲ್ಲಿ ಮನನೊಂದು ಸ್ವಗೃಹದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts