ನವಲಗುಂದ: ಮಹದಾಯಿ ನದಿ ಜೋಡಣೆ ಹಾಗೂ ಕಳಸಾ- ಬಂಡೂರಿ ಯೋಜನೆ ಅನá-ಷ್ಠಾನಕ್ಕೆ ಆಗ್ರಹಿಸಿ ಅಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆದು ಕೊಟ್ಟ ನೀವೇ ಇಂದು ರಾಜ್ಯದ ಮುಖ್ಯಮಂತ್ರಿಗಳಾಗಿದ್ದೀರಿ. ಹೀಗಾಗಿ ಯೋಜನೆ ಅನá-ಷ್ಠಾನಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಾನು ಮೈಲಾರಪ್ಪ ಕುಬೇರಪ್ಪ ವೈದ್ಯ ಎಂಬ ರೈತ ನಿಮಗೆ ರಕ್ತದಲ್ಲಿ ಪತ್ರ ಬರೆದಿದ್ದೇನೆ ಎಂದು ತಹಸೀಲ್ದಾರ್ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.