More

    ಮಗನನ್ನು ಉಳಿಸಿ ಜವರಾಯನಿಗೆ ತನ್ನ ಪ್ರಾಣವನ್ನೇ ಕೊಟ್ಟ ತಂದೆ! ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ

    ಮಂಡ್ಯ: ಲಾರಿ ರೂಪದಲ್ಲಿ ಎದುರಾದ ಜವರಾಯನಿಂದ ಮಗನನ್ನು ಉಳಿಸಿ ತಂದೆ ಪ್ರಾಣಕೊಟ್ಟ ಹೃದಯವಿದ್ರಾವಕ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಎಂತಹವರ ಹೃದಯವನ್ನೂ ಭಾರವಾಗಿಸುತ್ತೆ ಈ ಸುದ್ದಿ. ವಿಧಿಯನ್ನೊಮ್ಮೆ ಮನದಲ್ಲೇ ಶಪಿಸುವಂತೆ ಮಾಡುತ್ತೆ.

    ಪಾಂಡವಪುರ ತಾಲೂಕು ನ್ಯಾಮನಹಳ್ಳಿ ಸಮೀಪ ಲಾರಿ ಡಿಕ್ಕಿ ಹೊಡೆಯುವುದನ್ನು ಗಮನಿಸಿ ಆಟೋದಲ್ಲಿದ್ದ ತಂದೆ, ತನ್ನ ಮಗನನ್ನು ಕೆಳಗೆ ತಳ್ಳಿ ಅಪಘಾತಕ್ಕೆ ಬಲಿಯಾಗಿದ್ದಾರೆ. ತಾಲೂಕಿನ ಮುದಗಂದೂರು ಗ್ರಾಮದ ಶ್ರೀನಿವಾಸ್(43) ಮೃತ. ಇವರ ಮಗ ವಿಶ್ವಾಸ್ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿರುವ ಹಿನ್ನೆಲೆಯಲ್ಲಿ ಪಾಂಡವಪುರ ಪಟ್ಟಣದ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಶ್ರೀನಿವಾಸ್ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತರಕಾರಿ ತರಲೆಂದು ತಂದೆ ಮತ್ತು ಮಗ ತಮ್ಮ ಆಫೆ ಆಟೋದಲ್ಲಿ ಮೈಸೂರಿಗೆ ತೆರಳಿದ್ದರು. ಕೆಲಸ ಮುಗಿಸಿ ಊರಿಗೆ ವಾಪಸಾಗುತ್ತಿದ್ದರು. ಈ ವೇಳೆ ನ್ಯಾಮನಹಳ್ಳಿಯ ಸಮೀಪ ಲಾರಿಯೊಂದು ಅಡ್ಡಾದಿಡ್ಡಿಯಾಗಿ ಬಂದಿದೆ. ಇದನ್ನು ಗಮನಿಸಿದ ಶ್ರೀನಿವಾಸ್, ವಿಶ್ವಾಸ್‌ನನ್ನು ಆಟೋದಿಂದ ಕೆಳಗೆ ತಳ್ಳಿದ್ದಾರೆ. ಕ್ಷಣಾರ್ಧದಲ್ಲಿಯೇ ಆಟೋ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ. ಅಪಘಾತದಲ್ಲಿ ಶ್ರೀನಿವಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಇತ್ತ ಚಿಕಿತ್ಸೆ ಪಡೆಯುತ್ತಿರುವ ವಿಶ್ವಾಸ್‌ಗೆ ತಂದೆ ಮೃತಪಟ್ಟಿರುವ ಮಾಹಿತಿ ನೀಡಲು ಕುಟುಂಬಸ್ಥರು ಹಿಂದೇಟು ಹಾಕುತ್ತಿದ್ದಾರೆ. ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಚಾಕೊಲೇಟ್​ ನುಂಗಿದ ಬಾಲಕಿ ಉಸಿರುಗಟ್ಟಿ ಸಾವು: ಬೈಂದೂರಲ್ಲಿ ಹೃದಯವಿದ್ರಾವಕ ಘಟನೆ

    ಬೈಕ್​ ಸ್ಕಿಡ್​ ಆಗಿ ವಿದ್ಯಾರ್ಥಿಗಳಿಬ್ಬರ ಸಾವು: ರಜೆ ಹಿನ್ನೆಲೆ ಮುರುಡೇಶ್ವರಕ್ಕೆ ತೆರಳುವಾಗ ಅವಘಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts