More

    ಎರಡು ಗುಂಪುಗಳ ನಡುವೆ ಹೊಡೆದಾಟ

    ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಅಸ್ಕಿಹಾಳ ಬಡಾವಣೆಯಲ್ಲಿ ಬುಧವಾರ ತಡರಾತ್ರಿ ಜರುಗಿದೆ.
    ಬಡಾವಣೆಯ ಎರಡು ಗುಂಪಿನ ಯುವಕರ ಮಧ್ಯೆ ಎರಡ್ಮೂರು ವರ್ಷಗಳಿಂದ ಜಟಾಪಟಿ ನಡೆಯುತ್ತಿದ್ದು, ಸೋಮವಾರ ರಾತ್ರಿ ಕೂಡಾ ಯುವಕರ ನಡುವೆ ವಾಗ್ವಾದ ಜರುಗಿದೆ. ಬುಧವಾರ ಎರಡು ಗುಂಪಿನ ಯುವಕರನ್ನು ಕರೆದು ರಾಜೀ ಪಂಚಾಯಿತಿ ನಡೆಸುವಾಗ ಗಲಾಟೆ ಆರಂಭವಾಗಿದೆ.
    ಎರಡು ಗುಂಪಿನ ಯುವಕರು ನಡುವೆ ಮಾತಿಗೆ ಮಾತು ಬೆಳೆದು ಕೊನೆಗೆ ದೊಣ್ಣೆ, ಕಬ್ಬಿಣದ ರಾಡ್ ಹಿಡಿದು ಹೊಡೆದಾಡಿದ್ದಾರೆ. ಈ ಸಂದರ್ಭದಲ್ಲಿ ರೇಷ್ಮಾ, ನರಸಪ್ಪ, ಮನೋಹರ, ಗಿರಿಜಾ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
    ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಗೆ ಸಂಬಂಸಿದಂತೆ ರಂಗಪ್ಪ ಸೇರಿದಂತೆ ಒಟ್ಟು 15 ಜನರ ವಿರುದ್ಧ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts