More

    ಇದು ಕ್ರಿಕೆಟ್​ ಆಟಗಾರ್ತಿಯ ಸಾಧನೆಯ ಕಥೆ … ಅತಿಥಿ ಪಾತ್ರಗಳಲ್ಲಿ ರಣಜಿ ಆಟಗಾರರು

    ಬೆಂಗಳೂರು: ಕ್ರಿಕೆಟ್​ ಕುರಿತು ಹಲವು ಚಿತ್ರಗಳು ಇದುವರೆಗೂ ಎಲ್ಲಾ ಭಾಷೆಗಳಲ್ಲೂ ಬಂದಿದೆ. ಕನ್ನಡದಲ್ಲೂ ಬಂದಿದ್ದು, ಆದರೆ ಕ್ರಿಕೆಟ್ ಆಟಗಾರ್ತಿಯ ಸಾಧನೆಯ ಕುರಿತಂತೆ ಕಥೆ ಇಟ್ಟುಕೊಂಡು ಯಾವುದೇ ಚಿತ್ರ ನಿರ್ಮಾಣವಾಗಿರಲಿಲ್ಲ. ಈಗ ಅಂಥದ್ದೊಂದು ಪ್ರಯತ್ನವಾಗಿದ್ದು, ಚಿತ್ರಕ್ಕೆ ‘ಸಹರಾ’ ಎಂದು ಹೆಸರಿಡಲಾಗಿದೆ.

    ಇದನ್ನೂ ಓದಿ: ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದು ಕೊಲೆ … ಪೋಸ್ಟ್​ ಮಾರ್ಟಂ ಮಾಡಿದವರಿಂದ ಬಯಲು

    ಕಳೆದ ಎಂಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಮಂಜೇಶ್ ಭಗವತ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತು ಈ ಚಿತ್ರವನ್ನು ಹೊರತರುತ್ತಿದ್ದಾರೆ. ಮಾ ಕ್ರಿಯೆಷನ್ಸ್ ಪ್ರಥಮ ನಿರ್ಮಾಣದ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ, ಸಂಭಾಷಣೆ ರಚಿಸಿದ್ದಾರೆ.

    ಈಗಾಗಲೇ ‘ಸಹರಾ’ ಚಿತ್ರಕ್ಕೆ ಮೈಸೂರು, ನಂಜನಗೂಡು, ಬೆಂಗಳೂರು, ಚಿಕ್ಕಮಗಳೂರು, ಮೂಡಿಗೆರೆ, ಸಕಲೇಶಪುರ ಸುತ್ತಮುತ್ತ ಶೇ. 95ರಷ್ಟು ಚಿತ್ರೀಕರಣ ಮುಗಿದಿದ್ದು, ಕ್ಲೈಮ್ಯಾಕ್ಸ್​ ಚಿತ್ರೀಕರಣ ಮಾತ್ರ ಬಾಕಿ ಇದೆ.

    ಈ ಚಿತ್ರದಲ್ಲಿ ನಾಯಕಿಯಾಗಿ ಮೈಸೂರಿನ ಸಾರಿಕಾ ರಾವ್ ಅಭಿನಯಿಸಿದ್ದಾರೆ. ರಣಜಿ ಆಟಗಾರರಾದ. ಕೆ.ಬಿ. ಪವನ್ ಅವರ ಬಳಿ ಕ್ರಿಕೆಟ್ ತರಬೇತಿ ಪಡೆದು ಈ ಚಿತ್ರದಲ್ಲಿ ಸಾರಿಕಾ ಅಭಿನಯಿಸಿದ್ದಾರೆ. ಭಾರತ ತಂಡ ಪ್ರತಿನಿಧಿಸಿದ ಕರ್ನಾಟಕದ ಮಾಜಿ ಆಟಗಾರರಾದ ಡೇವಿಡ್ ಜಾನ್ಸನ್ ಮತ್ತು ರಘುರಾಮ್ ಭಟ್ ಈ ಚಿತ್ರದಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

    ಇದನ್ನೂ ಓದಿ: ಮೂರು ಸೆಕೆಂಡ್​ಗಳಲ್ಲಿ ‘ಸರ್ಕಸ್​’ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡರಂತೆ ರಣವೀರ್​ ಸಿಂಗ್​

    ‘ಸಹರಾ’ ಚಿತ್ರದಲ್ಲಿ ಮಂಜುನಾಥ ಹೆಗಡೆ, ಕುರಿ ಸುನಿಲ್, ಅಂಕುಶ್ ರಜತ್, ರಂಜನ್, ಮಂಜುಳಾ ರೆಡ್ಡಿ, ಪ್ರಕಾಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ವಿನ್ಸೆಂಟ್ ಅಂಥೋಣಿ ರೂಥ್ ಅವರ ಛಾಯಾಗ್ರಹಣ, ಸೂರಜ್ ಜೋಯಿಸ್ ಅವರ ಸಂಗೀತ ಸಂಯೋಜನೆ,

    ಒಂದು ಕಾಲದ ಸ್ಟಾರ್​ ನಟ ಅಬ್ಬಾಸ್​, ನ್ಯೂಜಿಲ್ಯಾಂಡ್​ನಲ್ಲಿ ಟಾಯ್ಲೆಟ್​ ತೊಳೆಯುತ್ತಿದ್ದರಂತೆ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts