ವಿಜಯನಗರ: ಅಪಘಾತಕ್ಕೀಡಾಗಿ ಗಾಯಗೊಂಡು ನೋವಿನಲ್ಲಿ ನರಳುತ್ತಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಸ್ಯಾಂಡಲ್ವುಡ್ ನಟ ಅಜಯ್ ರಾವ್ ಮಾನವೀಯತೆ ಮೆರೆದಿದ್ದಾರೆ.
ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಳಿ ಸೋಮವಾರ ತಡರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಇದೇ ವೇಳೆ ಹೊಸಪೇಟೆಯಿಂದ ಬೆಂಗಳೂರಿನತ್ತ ಅಜಯ್ರಾವ್ ಪ್ರಯಾಣಿಸುತ್ತಿದ್ದರು.
ಕಾನಾಹೊಸಳ್ಳಿ ಬಳಿ ಅಪಘಾತ ಆಗಿರುವುದನ್ನು ನೋಡಿದ ಅಜಯ್, ತನ್ನ ವಾಹನ ನಿಲ್ಲಿಸಿ ತಕ್ಷಣ ಗಾಯಾಳುಗಳ ನೆರವಿಗೆ ಧಾವಿಸಿದರು. ತನ್ನ ವಾಹನದಲ್ಲಿದ್ದ ಪ್ರಥಮ ಚಿಕಿತ್ಸಾ ಕಿಟ್ ತಂದು ಸ್ವತಃ ಅಜಯ್ ಅವರೇ ಗಾಯಾಳುಗಳಿಗೆ ಚಿಕಿತ್ಸೆ ಮಾಡಿದರು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಹಾಗೂ ಪಿಎಸ್ಐ ಕೂಡ ಗಾಯಾಳುಗಳ ಸಹಾಯಕ್ಕೆ ಧಾವಿಸಿದ್ದರು. ಅಜಯ್ರಾವ್ರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಪದೇಪದೆ ಸರ್ಪಗಳು ಬರುತ್ತಿವೆ… ಎಂದು ಮನೆಯಲ್ಲಿ ಬಾವಿ ತೋಡಿದ ದಂಪತಿ! ವಾರದ ಬಳಿಕ ಕಾದಿತ್ತು ಶಾಕ್
ನನ್ನ ತಂದೆಗೆ ಹಲವು ಕಾಲ್ಗರ್ಲ್ ಜತೆ ಸಂಪರ್ಕ ಇತ್ತು, ಅವನೊಬ್ಬ ಕಾಮುಕ, ಮಹಿಳೆಯರನ್ನ ಟ್ರ್ಯಾಪ್ ಮಾಡ್ತಿದ್ದ…
ಗ್ರಾಮಲೆಕ್ಕಿಗನ ಜತೆ ಮದ್ವೆಯಾದ ತಹಸೀಲ್ದಾರ್ ಗೀತಾ! ಮೊದಲ ಪತ್ನಿ ಎಂಟ್ರಿ ಕೊಡುತ್ತಿದ್ದಂತೆ ಡಿಸಿ ಅಂಗಳಕ್ಕೆ ವಿವಾದ