More

    ವಾಕಿಂಗ್​ ವೇಳೆ ಅಪಘಾತ: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಸಾವು

    ಬೆಂಗಳೂರು: ‘ಕರಿಯ’, ‘ಕರಿಯ 2’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ (58) ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.

    ಭಾನುವಾರ ಬೆಳಗ್ಗೆ 8 ಗಂಟೆಗೆ ಪುಟ್ಟೇನಹಳ್ಳಿ ಸಮೀಪದ ಗೌರವ್​ನಗರದಲ್ಲಿ ರಸ್ತೆಬದಿ ಕಾರು ನಿಲುಗಡೆ ಮಾಡಿ ಎಂದಿನಂತೆ ವಾಕಿಂಗ್​ಗೆ ಹೋಗಲು ರಸ್ತೆ ದಾಟುತ್ತಿದ್ದರು. ಆ ವೇಳೆ ವೇಗವಾಗಿ ಬಂದ ಪಲ್ಸರ್​ ಬೈಕ್​ ಕಾರನ್ನು ಹಿಂದಿಕ್ಕುವ ಭರದಲ್ಲಿ ಬಾಲರಾಜ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲರಾಜ್​ ರಸ್ತೆಗೆ ಬಿದ್ದು ತಲೆ ಹಿಂಬದಿಗೆ ಗಂಭೀರ ಗಾಯವಾಗಿತ್ತು. ಸ್ಥಳೀಯರು ಜೆ.ಪಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಮಾರಸ್ವಾಮಿ ಲೇಔಟ್​ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಿಕ್ಕಿ ಹೊಡೆದ ಬೈಕ್​ ಸವಾರ ಪರಾರಿಯಾಗಿದ್ದಾನೆ. ಕೃತ್ಯ ನಡೆದ ಆಸುಪಾಸಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾ ಪರಿಶೀಲಿಸಿ ಆರೋಪಿ ಬೈಕ್​ ಸವಾರನಿಗೆ ಪೊಲೀಸರು ಶೋಧ ನಡೆಸಿದ್ದಾರೆ.

    ಹಲವು ಚಿತ್ರಗಳ ನಿರ್ಮಾಪಕ:ಕರಿಯ’ ಚಿತ್ರದ ಮೂಲಕ ನಿರ್ಮಾಪಕರಾಗುವ ಜತೆಗೆ, ಪ್ರೇಮ್​ರನ್ನು ನಿರ್ದೇಶಕರಾಗಿ ಪರಿಚಯಿಸಿದವರು ಬಾಲರಾಜ್​. ‘ಕರಿಯ’ ನಂತರ ‘ಆಹಾ’, ‘ಜಾಕ್​ಪಾಟ್​’, ‘ಕೆಂಪ’, ‘ಜನ್ಮ’, ‘ಗಣಪ’, ‘ಕರಿಯ 2’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದರು. ‘ಕೆಂಪ’ ಚಿತ್ರದ ಮೂಲಕ ಮಗ ಸಂತೋಷ್​ನನ್ನು ನಾಯಕ ನಟನನ್ನಾಗಿ ಪರಿಚಯಿಸಿದ್ದರು. ಸದ್ಯ, ಸಂತೋಷ್​ ಅಭಿನಯದ ‘ಬರ್ಕ್ಲಿ’ ಎಂಬ ಚಿತ್ರವನ್ನು ನಿರ್ಮಿಸಿದ್ದು, ಆ ಚಿತ್ರ ಇನ್ನಷ್ಟೇ ಬಿಡುಗಡೆಯಾಕು. ಅಷ್ಟರಲ್ಲಿ ದುರಂತ ಸಂಭವಿಸಿ ಆನೇಕಲ್​ ಬಾಲರಾಜ್ ಅವರು ಬಾರದ ಲೋಕಕ್ಕೆ ಹೋಗಿದ್ದಾರೆ.

    ನೀವಾದ್ರೂ ಒಪ್ಸಿ ಅವಳ ಜತೆ ಮದ್ವೆ ಮಾಡ್ಸಿ ಸಾರ್​… ಪೊಲೀಸರ ಬಳಿ ಗೋಗರೆದ ಆ್ಯಸಿಡ್​ ನಾಗ​! ಇಷ್ಟಲ್ಲಾ ಆದ್ರೂ ನಿಲ್ಲದ​ ಹುಚ್ಚಾಟ

    ಟೆಕ್ನಿಕಲ್ ಎವಿಡೆನ್ಸ್ ಸಿಗಲೇ ಇಲ್ಲ… ಕರಪತ್ರ ಹಂಚಿ ಆ್ಯಸಿಡ್​ ನಾಗೇಶ್​ನನ್ನು ಬಂಧಿಸಿದ್ದೇ ರೋಚಕ!

    ಆ್ಯಸಿಡ್​ ದಾಳಿಕೋರ ನಾಗೇಶ್​ ಬಂಧನ: ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts