ಮಕ್ಕಳು ಪಾಠ ಕೇಳುತ್ತಿದ್ದಾಗಲೇ ಶಾಲಾ ಕಟ್ಟಡದಲ್ಲಿ ಬೆಂಕಿ; ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು

ಬಳ್ಳಾರಿ : ಶಾಲೆಯಲ್ಲಿ ಮಕ್ಕಳು ಪಾಠ ಕೇಳುವಾಗಲೇ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಸಿರುಗುಪ್ಪ ಪಟ್ಟಣದಲ್ಲಿ ನಡೆದಿದೆ. ಸಿರುಗುಪ್ಪ ಪಟ್ಟಣದ ಸುದೀಕ್ಷಾ ಇಂಟರ್ನ್ಯಾಷನಲ್ ಶಾಲೆಯಲ್ಲಿ, ವಿದ್ಯುತ್ ಪೂರೈಕೆ ಸ್ಥಗಿತವಾದ್ದರಿಂದ ಶಾಲೆಯ ಜನರೇಟರ್ ಆನ್ ಮಾಡಲಾಗಿತ್ತು. ಜನರೇಟರ್ ಕೊಠಡಿಯಲ್ಲಿನ ವಿದ್ಯುತ್ ವೈರ್​ಗಳಲ್ಲಿ ಮೊದಲು ಬೆಂಕಿ ಹತ್ತಿಕೊಂಡಿದೆ. ಜನರೇಟರ್ ಕೊಠಡಿ ಹೊತ್ತಿ ಉರಿಯುತ್ತಲೇ ಅಲರ್ಟ್ ಆದ ಶಾಲಾ ಸಿಬ್ಬಂದಿ ಶಾಲೆಯ ಒಳಗಿದ್ದ 150 ಮಕ್ಕಳನ್ನ ಹಿಂಬಾಗಿಲಿನಿಂದ ಹೊರಗಡೆ ಕಳಿಸಿ ರಕ್ಷಣೆ‌ ಮಾಡಿದ್ದಾರೆ. ಶಾಲಾ ಸಿಬ್ಬಂದಿ ಮುನ್ನೆಚ್ಚರಿಕೆಯಿಂದ ಭಾರಿ ಅನಾಹುತ ತಪ್ಪಿದೆ. … Continue reading ಮಕ್ಕಳು ಪಾಠ ಕೇಳುತ್ತಿದ್ದಾಗಲೇ ಶಾಲಾ ಕಟ್ಟಡದಲ್ಲಿ ಬೆಂಕಿ; ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು