ವಿಜಯಪುರ: ಸಿಂದಗಿಯಲ್ಲಿನ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಅನುಮಾನಾಸ್ಪದವಾಗಿ ಸಾವಿಗೀಡಾದ ಹಿನ್ನೆಲೆ ಪಿಎಸ್ಐ ಸೇರಿ ಐವರು ಪೊಲೀಸರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಪಿಎಸ್ಐ ಸಂಗಮೇಶ ಹೊಸಮನಿ, ಸಿಬ್ಬಂದಿ ಎನ್.ಬಿ.ನಾದ್, ಗುರುರಾಜ್ ಮಾಶ್ಯಾಳ, ಅನಂತ ಪಾಟೀಲ್, ಪಿ.ಎಲ್. ಪಟ್ಟೇದ ಇವರನ್ನು ಅಮಾನತು ಮಾಡಿ ಎಸ್ಪಿ ಆನಂದಕುಮಾರ್ ಆದೇಶ ಹೊರಡಿಸಿದ್ದಾರೆ.
ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಡಾಬಾದಲ್ಲಿ ತಂದೆಯೊಂದಿಗೆ ವಾಸವಿದ್ದ 13 ವರ್ಷದ ಬಾಲಕಿ ಮೇಲೆ ಡಾಬಾ ಮಾಲೀಕ ದೇವಿಂದ್ರ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆಯ ತಂದೆ ಎರಡು ದಿನದ ಹಿಂದೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದೇವಿಂದ್ರ ಸಂಗೋಗಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಟಾಯ್ಲೆಟ್ಗೆ ಹೋಗುವುದಾಗಿ ಹೇಳಿ ಪೊಲೀಸ್ ಠಾಣೆಯ ಶೌಚಗೃಹಕ್ಕೆ ಹೋದವ ಅಲ್ಲೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ.
ಕರ್ತವ್ಯಲೋಪದ ಆಧಾರದ ಮೇಲೆ ಪಿಎಸ್ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಎಸ್ಪಿ ಆನಂದಕುಮಾರ್ ತಿಳಿಸಿದ್ದಾರೆ.
ರಸ್ತೆಬದಿ ನಿಂತಿದ್ದ ಲಾರಿಗೆ ಪೊಲೀಸ್ ಜೀಪ್ ಡಿಕ್ಕಿ: ಡಿವೈಎಸ್ಪಿ ಸೇರಿ ಮೂವರು ಪೊಲೀಸರಿಗೆ ಗಾಯ
ಮೈಸೂರಲ್ಲಿ ಗ್ಯಾಂಗ್ ರೇಪ್: ನಮ್ಮಲ್ಲೊಬ್ಬನಿಗೆ ಲೈಂಗಿಕ ಚಟವಿತ್ತು… ಬೆಚ್ಚಿಬೀಳಿಸುತ್ತೆ ಆರೋಪಿಗಳ ಮಾತು
ತುಮಕೂರಲ್ಲಿ ಅತ್ಯಾಚಾರ-ಹತ್ಯೆ: ಆರೋಪಿಗಳ ಸಣ್ಣ ಸುಳಿವೂ ಸಿಕ್ಕಿಲ್ಲ, ಸತ್ತದ್ದು ರೈತ ಮಹಿಳೆ ಎಂದು ಉದಾಸೀನವೇ?