ಆಸ್ತಿ ವಿವಾದದಲ್ಲಿ ಐದು ವರ್ಷದ ಬಾಲಕನನ್ನು ಗುಂಡಿಕ್ಕಿ ಹತ್ಯೆ!

ಬಿಹಾರ: ಆರ್ಯನ್ ಕುಮಾರ್ ಎಂಬ ಬಾಲಕ ಮನೆಯ ಹೊರಗೆ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಓಡಿ ಹೋಗಿರುವ ಘಟನೆ ಬಿಹಾರ ರಾಜ್ಯದ ಸಮಸ್ತಿಪುರ ಜಿಲ್ಲೆಯ ಸಿಹ್ಮಾ ಗ್ರಾಮದಲ್ಲಿ ನಡೆದಿದೆ. ಗುಂಡೇಟು ತಿಂದು ಆರ್ಯನ್ ರಕ್ತದ ಮಡುವಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಗ ಆತನ ಸ್ನೇಹಿತರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿ ಬೆಚ್ಚಿಬಿದ್ದ ಮನೆಯವರು ಆತನನ್ನು ಹಸನಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಆತನನ್ನು ಪರೀಕ್ಷಿಸಿದ ವೈದ್ಯರು ಆರ್ಯನ್ ಆಗಲೇ ಮೃತಪಟ್ಟಿರುವುದಾಗಿ … Continue reading ಆಸ್ತಿ ವಿವಾದದಲ್ಲಿ ಐದು ವರ್ಷದ ಬಾಲಕನನ್ನು ಗುಂಡಿಕ್ಕಿ ಹತ್ಯೆ!