More

    ಜಾತ್ರೆಗೆ ತೆರಳುತ್ತಿದ್ದ ಹುಡುಗಿಗೆ ಬೆಂಕಿ ತಗುಲಿ ಸಾವು; ಇನ್ನಿಬ್ಬರಿಗೆ ಗಾಯ

    ತುಮಕೂರು: ಜಾತ್ರೆಯೊಂದಕ್ಕೆ ತೆರಳುತ್ತಿದ್ದ ಹುಡುಗಿಗೆ ಬೆಟ್ಟದ ಪ್ರದೇಶದಲ್ಲಿ ಬೆಂಕಿ ತಗುಲಿ ಸಾವಿಗೀಡಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ಈ ಅವಘಡ ನಡೆದಿದೆ.

    ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದ ನಿವಾಸಿ ಮಾನಸ (15) ಸಾವಿಗೀಡಾದ ಬಾಲಕಿ. ಜಾತ್ರೆಗೆ ತೆರಳುತ್ತಿದ್ದ ವೇಳೆ ಬೆಟ್ಟದಲ್ಲಿ ಉರಿಯುತ್ತಿದ್ದ ಬೆಂಕಿ ಆಕಸ್ಮಿಕವಾಗಿ ತಗಲಿ ತೀವ್ರ ಗಾಯಗೊಂಡಿದ್ದ ಈಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅದಾಗ್ಯೂ ಬದುಕಿಸಿಕೊಳ್ಳಲು ಆಗಿರಲಿಲ್ಲ.

    ಇದನ್ನೂ ಓದಿ: ಬಾರ್‌ಗೆ ಬಂದ ಕಡಲಾಮೆ!; ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ

    ಇನ್ನಿಬ್ಬರಿಗೂ ಬೆಂಕಿ ತಗುಲಿ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts