ಭೋಪಾಲ್: ಇತ್ತೀಚೆಗೆ ಪಾನ್ ಮಸಾಲ ತಂಬಾಕು ಜಾಹಿರಾತಿನಲ್ಲಿ ಕಾಣಿಸಿಕೊಂಡು ಭಾರೀ ಸುದ್ದಿಯಾಗಿದ್ದ ಬೆನ್ನಲ್ಲೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಜಾಹಿರಾತಿನಿಂದ ಹಿಂದೆ ಸರಿದಿದ್ದರು.
ಆದರೆ.. ಇದಕ್ಕೆ ತಲೆಕೆಡಿಸಿಕೊಳ್ಳದೇ ತಮಗೆ ಹಣವೇ ಮುಖ್ಯ ಎಂದು ಮತ್ತೊಮ್ಮೆ ಸಾಬೀತುಪಡಿಸಿ ತಂಬಾಕು ಜಾಹಿರಾತಿನಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟರಾದ ಶಾರೂಕ್ ಖಾನ್ ಹಾಗೂ ಅಜಯ್ ದೇವಗನ್ ಅವರಿಗೆ ವಿದ್ಯಾರ್ಥಿನಿಯೊಬ್ಬಳು ಛೀ ಮಾರಿ ಹಾಕಿದ್ದಾಳೆ.
ಮಧ್ಯಪ್ರದೇಶದ ಖರಗೋನ್ ಜಿಲ್ಲೆಯವಳಾದ ಈಕೆ ಬಿಎ ವ್ಯಾಸಂಗ ಮಾಡುತ್ತಿದ್ದು, ಸ್ಟಾರ್ ನಟರನ್ನು ಈಗ ತರಾಟೆಗೆ ತೆಗೆದುಕೊಂಡಿದ್ದಾಳೆ
ಇದಕ್ಕೆ ಕಾರಣ.. ಖ್ಯಾತ ನಟರಿಬ್ಬರು ಆಕ್ಷೇಪದ ನಡುವೆಯೂ ತಂಬಾಕು ಜಾಹಿರಾತಿನಲ್ಲಿ ಕಾಣಿಸಿಕೊಂಡು ಯುವ ಜನತೆ ಮೇಲೆ ಪರಿಣಾಮ ಬೀರುವಂತೆ ಮಾಡಿದ್ದಾರೆ ಎಂದು ಈ ಬಾಲಕಿ ಆರೋಪಿಸಿದ್ದಾಳೆ. ಇದಕ್ಕಾಗಿ ಕೋಪಗೊಂಡು ಈ ಇಬ್ಬರು ನಟರ ಮನೆ ವಿಳಾಸಕ್ಕೆ 5 ರೂ. ಮನಿಆರ್ಡರ್ ಮಾಡಿದ್ದಾಳೆ.
ಶಾರೂಕ್ ಖಾನ್ ಮತ್ತು ಅಜಯ್ ದೇವಗನ್ ಅವರನ್ನು ನಾನು ಸಹೋದರನಂತೆ ಭಾವಿಸುತ್ತೇನೆ. ಹಾಗಾಗಿ ಇಬ್ಬರು ನನ್ನ ಮನವಿಯನ್ನು ಪುರಸ್ಕರಿಸಲೇಬೇಕು. ದಯವಿಟ್ಟು ಪಾನ್ ಮಸಾಲಾ ಜಾಹಿರಾತನ್ನು ಹಿಂಪಡೆದು ಯುವಜನತೆಯನ್ನು ರಕ್ಷಿಸಬೇಕೆಂದು ಕೇಳಿಕೊಂಡಿದ್ದಾಳೆ.
ನಾನು ನಿಮ್ಮಿಬ್ಬರ ಅಭಿಮಾನಿ ನಾನೂ ಕೂಡ ಪಾನ್ ಮಸಾಲಾ ತಿನ್ನಲು ಆರಂಭಿಸುತ್ತೇನೆ ಎಂದು ಈ ಇಬ್ಬರು ನಟರ ವಿರುದ್ಧ ಅಸಮಾಧಾನ ಹೊರಹಾಕಿದ್ದಾಳೆ. ಒಟ್ಟಾರೆ ಪಾನ್ ಮಸಾಲಾ ಜಾಹಿರಾತಿನ ವಿರೋಧದ ನಡುವೆಯೂ ಈ ನಟರು ಮುಂದುವರಿಸಿದ್ದು, ಈಗ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. (ಏಜೆನ್ಸೀಸ್)
1 ಗಂಟೆ ನಿರಂತರವಾಗಿ ಸುರಿದ ಭಾರೀ ಮಳೆಗೆ ಕೆರೆಯಂತಾದ ಬಸ್ ನಿಲ್ದಾಣ!ಬಸ್ಸಿಗಾಗಿ ಪರದಾಡಿದ ಪ್ರಯಾಣಿಕರು
ಬಾಲಿವುಡ್ v/s ದಕ್ಷಿಣ ಭಾರತ ಸಿನಿಮಾ ಬಗ್ಗೆ ಕೆಜಿಎಫ್-2 ನಟಿ ಹೇಳಿದ್ದು ಹೀಗೆ