ಸಿಂದಿಗೆರೆ ಅರಣ್ಯಕ್ಕೆ ಬೆಂಕಿ ಹಾಕುವವರ ಜೀವನ ಸರ್ವನಾಶವಾಗಲಿ: ದೇವರಿಗೆ ಗ್ರಾಮಸ್ಥರ ಹರಕೆ!

ಚಿಕ್ಕಮಗಳೂರು: ಕಳ್ಳರ ಕಾಟದಿಂದ ರಕ್ಷಣೆ ಪಡೆಯಲು ದೇವರ ಮೊರೆ ಹೋಗುವುದು ಸಾಮಾನ್ಯ. ಆದರೆ ಕಿಡಿಗೇಡಿಗಳು ಅರಣ್ಯಕ್ಕೆ ಕೊಳ್ಳಿ ಇಡುವುದನ್ನು ತಪ್ಪಿಸಲು ಇಲ್ಲಿನ ಗ್ರಾಮಸ್ಥರು ದೇವರಿಗೆ ಹರಕೆ ಹೊತ್ತಿದ್ದಾರೆ! ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದ ಅರಣ್ಯ ರಕ್ಷಣೆಗೆ ಹರಸಾಹಸ ಪಡುತ್ತಿದ್ದ ಸಿಂದಿಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಇಂಥದ್ದೊಂದು ಹರಕೆ ಕಟ್ಟಿದ್ದಾರೆ. ಸಿಂದಿಗೆರೆ ಬಯಲುಸೀಮೆ ಸಾಲಿನಲ್ಲಿದೆ. ಗ್ರಾಮದ ಅಕ್ಕಪಕ್ಕ ಕುರುಚಲು ಗಿಡಗಳುಳ್ಳ ಗುಡ್ಡಗಳಿವೆ. ಬೇಸಿಗೆಯಲ್ಲಿ ಅರಣ್ಯಕ್ಕೆ ಬೆಂಕಿ ಹೊತ್ತಿಕೊಳ್ಳುತ್ತದೆ. ಕಿಡಿಗೇಡಿಗಳೇ ಕಾಡಿಗೆ ಕಿಚ್ಚು ಇಡುತ್ತಾರೆ ಎಂಬುದು ಗ್ರಾಮಸ್ಥರ ಆರೋಪ. ಪ್ರತಿ ವರ್ಷ ಬೆಂಕಿಯಿಂದ … Continue reading ಸಿಂದಿಗೆರೆ ಅರಣ್ಯಕ್ಕೆ ಬೆಂಕಿ ಹಾಕುವವರ ಜೀವನ ಸರ್ವನಾಶವಾಗಲಿ: ದೇವರಿಗೆ ಗ್ರಾಮಸ್ಥರ ಹರಕೆ!