More

    ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ

    ಸುಂಟಿಕೊಪ್ಪ: ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ ದೊರೆಯಿತು.

    ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎನ್.ಶಂಕರ್ ರಥಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತ ಕೋರಿದರು. ಶಾಲಾ ಮಕ್ಕಳ ವಾದ್ಯಗೋಷ್ಠಿ, ಬೈಕ್ ಹಾಗೂ ಆಟೋ ಮೆರವಣಿಗೆ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಸಾಥ್ ನೀಡಿದರು.

    ಸಂವಿಧಾನ ರಚನೆ ಸೇರಿದಂತೆ ಇತರ ವಿಷಯಗಳ ಕುರಿತು 7ನೇ ಹೊಸಕೋಟೆ ಪ್ರೌಢಶಾಲೆ ಮುಖ್ಯ ಶಿಕ್ಷಕ ಸೋಮಯ್ಯ ಮಾಹಿತಿ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ, ಗ್ರಾಮ ಪಂಚಾಯಿತಿ ಸದಸ್ಯರಾದ ಮಧು ನಾಗಪ್ಪ , ಅಶ್ವಿನಿ, ಪಿಡಿಒ ಕೆ.ಎಲ್.ಮಧುಮತಿ, ಸಿಆರ್‌ಪಿ ಸೀಮಾ ಪ್ರಸನ್ನ, ಎಸ್‌ಡಿಎಂಸಿ ಅಧ್ಯಕ್ಷ ಕಬೀರ್ ಹಾಜರಿದ್ದರು.

    ಗ್ರಾಮ ಪಂಚಾಯಿತಿ ವತಿಯಿಂದ ಶಾಲಾ ಮಕ್ಕಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಚೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಬಳಿಕ ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts