More

    ಆರತಕ್ಷತೆ ವೇಳೆ ಕುಸಿದು ಬಿದ್ದು ಮದುಮಗ ಸಾವು! ಹೊಸಪೇಟೆಯಲ್ಲಿ ದುರಂತ ಘಟನೆ

    ವಿಜಯನಗರ: ಆರತಕ್ಷತೆ ವೇಳೆಯೇ ಮದುಮಗ ಹೃದಯಾಘಾತದಿಂದ ಮೃತಪಟ್ಟಿದ್ದು, ಮದುವೆಯಲ್ಲಿ ಸೂತಕ ಆವರಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮದುಮಗಳು ಆಘಾತಕ್ಕೀಡಾಗಿದ್ದಾಳೆ.

    ಇಂತಹ ಹೃದಯವಿದ್ರಾವಕ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಕುಟುಂಬಸ್ಥರ ಗೋಳಾಟ ನೋಡಿ ಮರುಗುತ್ತಿರುವ ಬಂಧುಗಳು ಮನದಲ್ಲೇ ವಿಧಿಯನ್ನೊಮ್ಮೆ ಶಪಿಸುತ್ತಿದ್ದಾರೆ. ಹೊನ್ನೂರ ಸ್ವಾಮಿ(26) ಮೃತ ದುರ್ದೈವಿ.

    ಬುಧವಾರ ಸಂಜೆ ಹೊನ್ನೂರ ಸ್ವಾಮಿ ಅವರ ಮದುವೆ ಆರತಕ್ಷತೆ ನಡೆಯುತ್ತಿತ್ತು. ಈ ವೇಳೆ ಎದೆ ನೋವಿನಿಂದ ಕುಸಿದು ಬಿದ್ದು ಅಸ್ವಸ್ಥಗೊಂಡ ಹೊನ್ನೂರ ಸ್ವಾಮಿ ಅವರನ್ನ ಕೂಡಲೇ ಸಮೀಪದ ಖಾಸಗಿ ಕ್ಲಿನಿಕ್​ಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮದುಮಗ ಕೊನೆಯುಸಿರೆಳೆದಿದ್ದಾನೆ.

    ಚಾಕೊಲೇಟ್​ ನುಂಗಿದ ಬಾಲಕಿ ಉಸಿರುಗಟ್ಟಿ ಸಾವು: ಬೈಂದೂರಲ್ಲಿ ಹೃದಯವಿದ್ರಾವಕ ಘಟನೆ

    ಮಗನನ್ನು ಉಳಿಸಿ ಜವರಾಯನಿಗೆ ತನ್ನ ಪ್ರಾಣವನ್ನೇ ಕೊಟ್ಟ ತಂದೆ! ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts