More

    ಜಿ.ಟಿ.ದೇವೇಗೌಡ ಜೆಡಿಎಸ್​ನ ಶಕ್ತಿ, ಅವರು ಪಕ್ಷ ತೊರೆದರೆ ಭಾರಿ ನಷ್ಟ: ವೈಎಸ್​ವಿ ದತ್ತ ಎಚ್ಚರಿಕೆ

    ಚಿಕ್ಕಮಗಳೂರು: ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದ ಶಕ್ತಿ. ಅವರು ಕಾಂಗ್ರೆಸ್​ಗೆ ಹೋದರೆ ಪಕ್ಷಕ್ಕೆ ಭಾರಿ ನಷ್ಟವಾಗಲಿದೆ ಎಂದು ಮಾಜಿ ಶಾಸಕ ವೈಎಸ್​ವಿ ದತ್ತ ಎಚ್ಚರಿಸಿದರು.

    ಜಿ.ಟಿ.ದೇವೇಗೌಡರಿಗೆ ಪಕ್ಷ ಸೂಕ್ತ ಆದ್ಯತೆ, ಗೌರವ ನೀಡಿಲ್ಲವೆಂದರೆ ಅದು ತಪ್ಪು. ಹಿರಿಯರು ಮತ್ತು ಸಂಘಟನಾ ಶಕ್ತಿಯಾಗಿರುವ ಅವರು ಜನತಾ ಪರಿವಾರದಿಂದ ಬಂದವರು. ಅವರ ಮನಸ್ಸಿಗೆ ನೋವಾಗಿರಬಹುದು ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು. ಜಿಟಿಡಿ ಅವರನ್ನು ಕಡೆಗಣಿಸಿ ಮತ್ಯಾರಿಗೋ ಆದ್ಯತೆ ನೀಡಿ ವೈಭವೀಕರಿಸಿದ್ದರಿಂದ ಅವರ ಮನಸ್ಸಿಗೆ ನೋವಾಗಿರಬಹುದು. ಬೇರೆ ಪಕ್ಷಕ್ಕೆ ಅವರನ್ನು ಹೋಗಲು ಬಿಡಬಾರದು. ಹಿರಿಯರಾದ ಅವರನ್ನು ಕರೆಸಿ ಮಾತನಾಡಬೇಕು. ಅವರ ಮನಸ್ಸಿನ ಭಾವನೆ ಅರ್ಥ ಮಾಡಿಕೊಂಡು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಬೇಕು. ಮೂಲ ಜನತಾ ಪರಿವಾರದಿಂದ ಬಂದ ಅವರನ್ನು ಜೆಡಿಎಸ್ ಪಕ್ಷದಲ್ಲೇ ಉಳಿಸಿಕೊಳ್ಳುತ್ತಾರೆಂಬ ನಂಬಿಕೆ ಇದೆ ಎಂದರು.

    ವೈಎಸ್​ವಿ ದತ್ತ ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಪಕ್ಷ ಬಿಜೆಪಿ ಜತೆ ಹತ್ತಿರವಾದರೆ ನಮಗೆ ಸಮಸ್ಯೆ. ಅಲ್ಪಸಂಖ್ಯಾತರ ಒಡನಾಟ ಹೊಂದಿ ಅವರನ್ನೇ ನೆಚ್ಚಿಕೊಂಡಿರುವ ನಮ್ಮಂಥವರಿಗೆ ತುಂಬ ಕಷ್ಟವಾಗುತ್ತದೆ. ನಾವು ಕೋಮುವಾದಿ ಶಕ್ತಿಗಳನ್ನು ವಿರೋಧಿಸಿ, ಜಾತ್ಯತೀತ ನಿಲುವಿಗೆ ಕಟ್ಟಿಬದ್ಧರಾಗಿರೋರು. ಪಕ್ಷದ ನಿಲುವು ಎಲ್ಲಿಯವರೆಗೆ ಸ್ಪಷ್ಟವಾಗಿರುತ್ತದೋ ಅಲ್ಲಿಯವರೆಗೆ ಬೇರೆ ಆಲೋಚನೆ ಇಲ್ಲ. ಪಕ್ಷ ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವಕ್ಕೆ ಬದ್ಧವಾಗಿರುತ್ತದೋ ಅಲ್ಲಿಯವರೆಗೂ ನನ್ನ ಜೆಡಿಎಸ್ ನಿಲುವು ಒಂದೇ ಎಂದು ಸ್ಪಷ್ಟಪಡಿಸಿದರು.

    ಅವ್ರು ದೊಡ್ಡವ್ರು ಬೇಡವ್ವ.. ಅಂದ್ರೂ ಮದ್ವೆ ಆಗ್ತೀನಂತ ಹಠ ಹಿಡಿದು ಅವನೊಂದಿಗೇ ಬಾರದ ಲೋಕಕ್ಕೆ ಹೋಗಿಬಿಟ್ಲು…

    ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts