More

    ಗುಜರಾತ್ ಸಿಎಂ ವಿಜಯ್ ರೂಪಾನಿ ದಿಢೀರ್​ ರಾಜೀನಾಮೆ! ಅವಧಿಗೂ ಮೊದಲೇ ರಾಜೀನಾಮೆ ಕೊಟ್ಟಿದ್ದೇಕೆ?

    ಗಾಂಧಿನಗರ: ಗುಜರಾತ್ ಸಿಎಂ ವಿಜಯ್ ರೂಪಾನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಶನಿವಾರ ಭೇಟಿ ಮಾಡಿದ ವಿಜಯ್ ರೂಪಾನಿ, ರಾಜೀನಾಮೆ ಸಲ್ಲಿಸಿದರು. ನರೇಂದ್ರ ಮೋದಿ ತವರಲ್ಲಿ ಇಂದು ಸಂಭವಿಸಿದ ದಿಢೀರ್​ ಬೆಳವಣಿಗೆ ಅಚ್ಚರಿ ಮೂಡಿಸಿದೆ.

    ರಾಜೀನಾಮೆಯ ಹಿಂದಿನ ನಿಜವಾದ ಕಾರಣ ಸ್ಪಷ್ಟವಾಗಿಲ್ಲವಾದರೂ, ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರೊಂದಿಗಿನ ಭಿನ್ನಾಭಿಪ್ರಾಯಗಳು ವಿಜಯ್​ರನ್ನು ಕೆಳಗಿಳಿಯುವಂತೆ ಮಾಡಿರಬಹುದು ಎಂಬ ಮಾತುಗಳೂ ಕೇಳಿ ಬಂದಿದೆ. ಮುಂದಿನ ವರ್ಷ ತನ್ನ ಅಧಿಕಾರಾವಧಿಯನ್ನು ಮುಗಿಸಬೇಕಿದ್ದ ರೂಪಾನಿ, 2017ರ ಡಿಸೆಂಬರ್‌ನಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.

    ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯ್​ ರೂಪಾನಿ, ನನಗೆ ಇಷ್ಟು ದಿನ ಸಿಎಂ ಆಗಿ ಕೆಲಸ ಮಾಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಎಂದರು.

    ಆ ಚುಚ್ಚುಮಾತನ್ನ ಸಹಿಸಲಾಗ್ತಿಲ್ಲ, ನನ್ನ ಸಾವಿಗೆ ಅಪ್ಪ-ಅಮ್ಮನೇ ಕಾರಣ… ಮಗನ ಸಾವಿನ ಬಳಿಕ ಹೆತ್ತವರು ಎಸ್ಕೇಪ್​

    ಚಳ್ಳಕೆರೆಯ ಕಾಂಗ್ರೆಸ್ ಮುಖಂಡನ ಸಾವಿನ ರಹಸ್ಯ ಬಯಲು! ಅವಳೊಂದಿಗಿನ ಒಡನಾಟವೇ ಕಾರಣ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts