ಗಾಂಧಿನಗರ: ಗುಜರಾತ್ ಸಿಎಂ ವಿಜಯ್ ರೂಪಾನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಶನಿವಾರ ಭೇಟಿ ಮಾಡಿದ ವಿಜಯ್ ರೂಪಾನಿ, ರಾಜೀನಾಮೆ ಸಲ್ಲಿಸಿದರು. ನರೇಂದ್ರ ಮೋದಿ ತವರಲ್ಲಿ ಇಂದು ಸಂಭವಿಸಿದ ದಿಢೀರ್ ಬೆಳವಣಿಗೆ ಅಚ್ಚರಿ ಮೂಡಿಸಿದೆ.
ರಾಜೀನಾಮೆಯ ಹಿಂದಿನ ನಿಜವಾದ ಕಾರಣ ಸ್ಪಷ್ಟವಾಗಿಲ್ಲವಾದರೂ, ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರೊಂದಿಗಿನ ಭಿನ್ನಾಭಿಪ್ರಾಯಗಳು ವಿಜಯ್ರನ್ನು ಕೆಳಗಿಳಿಯುವಂತೆ ಮಾಡಿರಬಹುದು ಎಂಬ ಮಾತುಗಳೂ ಕೇಳಿ ಬಂದಿದೆ. ಮುಂದಿನ ವರ್ಷ ತನ್ನ ಅಧಿಕಾರಾವಧಿಯನ್ನು ಮುಗಿಸಬೇಕಿದ್ದ ರೂಪಾನಿ, 2017ರ ಡಿಸೆಂಬರ್ನಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.
ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯ್ ರೂಪಾನಿ, ನನಗೆ ಇಷ್ಟು ದಿನ ಸಿಎಂ ಆಗಿ ಕೆಲಸ ಮಾಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಎಂದರು.
ಆ ಚುಚ್ಚುಮಾತನ್ನ ಸಹಿಸಲಾಗ್ತಿಲ್ಲ, ನನ್ನ ಸಾವಿಗೆ ಅಪ್ಪ-ಅಮ್ಮನೇ ಕಾರಣ… ಮಗನ ಸಾವಿನ ಬಳಿಕ ಹೆತ್ತವರು ಎಸ್ಕೇಪ್
ಚಳ್ಳಕೆರೆಯ ಕಾಂಗ್ರೆಸ್ ಮುಖಂಡನ ಸಾವಿನ ರಹಸ್ಯ ಬಯಲು! ಅವಳೊಂದಿಗಿನ ಒಡನಾಟವೇ ಕಾರಣ…