ಬೆಂಗಳೂರು: ‘ನನ್ನ ಬಳಿ ಒಂದು ಗನ್, 8 ಬಾಂಬ್ ಹಾಗೂ 2 ಕತ್ತಿ ಇದೆ. ನನ್ನ ತಂದೆ ವಕೀಲ, ಚಿಕ್ಕಪ್ಪ ಶಾಸಕ ಆಗಿದ್ದಾರೆ. ನಿಮ್ಮ ವಿರುದ್ಧ ಯಾವುದೇ ರೀತಿಯ ವಿಧ್ವಂಸಕ ಕೃತ್ಯವೆಸಗಲು ನಾನು ಸಮರ್ಥನಿದ್ದೇನೆ’ ಎಂದು ಕೆಲಸ ಮಾಡುತ್ತಿದ್ದ ಸಂಸ್ಥೆಯ ಆಡಳಿತ ಮಂಡಳಿಗೇ ಇ-ಮೇಲ್ ಕಳುಹಿಸಿ ಬೆದರಿಕೆಯೊಡ್ಡಿದ್ದ ಸಾಪ್ಟ್ವೇರ್ ಇಂಜಿನಿಯರ್ಗೆ ಹೈಕೋರ್ಟ್ ತಕ್ಕಶಾಸ್ತಿ ಮಾಡಿದೆ.
ಉದ್ಯೋಗ ನೀಡಿದ್ದ ಸಂಸ್ಥೆಗೆ ಬೆದರಿಕೆ ಹಾಕಿದ ಇಂಜಿನಿಯರ್ ಹೆಸರು ಆಶೀಶ್ ಕುಮಾರ್ ನಾಥ್. ಈತ ಜೆಪಿ ನಗರದಲ್ಲಿ ಶಾಖೆ ಹೊಂದಿರುವ, ಅಮೆರಿಕ ಮೂಲದ ಸಾಪ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಶಿಸ್ತು ಉಲ್ಲಂಘನೆಯ ಕಾರಣಕ್ಕೆ ಆಶೀಶ್ನನ್ನು ಕೆಲಸದಿಂದ ವಜಾ ಮಾಡಿತ್ತು. ಈ ಪ್ರಕರಣ ಬೆಂಗಳೂರಿನ 3ನೇ ಹೆಚ್ಚುವರಿ ಕಾರ್ಮಿಕ ನ್ಯಾಯಾಲಯದ ಮೆಟ್ಟಿಲೇರಿತ್ತು. ಕೆಲಸದಿಂದ ವಜಾಗೊಂಡಿದ್ದ ಆಶೀಶ್ ಎಂಬಾತನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಂಡು, ಎಲ್ಲ ಹಿಂಬಾಕಿ ಪಾವತಿಸುವಂತೆ ಕಾರ್ಮಿಕ ನ್ಯಾಯಾಲಯ 2021ರ ಫೆ.26ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಾಪ್ಟ್ವೇರ್ ಕಂಪನಿಯು ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿತ್ತು.
ಕಂಪನಿಯ ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರಿದ್ದ ಪೀಠ, ಆಶೀಶ್ ಕುಮಾರ್ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಸೂಚಿಸಿ ಕಾರ್ಮಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದು ಪಡಿಸಿದೆ. ಆತನನ್ನು ಕೆಲಸದಿಂದ ಬಿಡುಗಡೆಗೊಳಿಸಲು ಅನುಮತಿ ನೀಡಿದೆ. ಯಾವುದೇ ಶಿಸ್ತು ವಿಚಾರಣೆ ನಡೆಸದೆ ಉದ್ಯೋಗಿಯನ್ನು ಕೆಲಸದಿಂದ ತೆಗೆದು ಹಾಕಿದ್ದ ಹಿನ್ನೆಲೆಯಲ್ಲಿ ಆತನಿಗೆ 10 ಲಕ್ಷ ರೂ. ಪರಿಹಾರ ಪಾವತಿಸುವಂತೆ ಉದ್ಯೋಗದಾತ ಕಂಪನಿಗೆ ನಿರ್ದೇಶಿಸಿದೆ.
ದೊಡ್ಡ ತ್ಯಾಗಕ್ಕೆ ಸಿದ್ಧರಾದರೇ ಡಿಕೆಶಿ? ಕುತೂಹಲ ಮೂಡಿಸಿದೆ ಅವರ ಈ ಮಾತು…
‘ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ, ಕಾರಂಜಿ ಕಲ್ಲು! ಡಮರುಗ, ಕಮಲ, ಆನೆ, ಕುದುರೆ… ಹಿಂದೂ ಚಿಹ್ನೆಯಲ್ಲ’