More

    ರಂಗೇರಿದ ಹಾನಗಲ್​ ಉಪ ಸಮರ: ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಎಸ್‌ವೈ, ಸಿಎಂ

    ಹಾವೇರಿ: ಹಾನಗಲ್​ ವಿಧಾನಸಭಾ ಉಪ ಚುನಾವಣೆ ಸಮರ ಕಾವೇರಿದ್ದು, ಶತಾಯಗತಾಯ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ, 19 ಅಂಶಗಳ ಪ್ರಣಾಳಿಕೆಯನ್ನ ಶನಿವಾರ ಬಿಡುಗಡೆ ಮಾಡಿದೆ. ಅಭ್ಯರ್ಥಿ ಶಿವರಾಜ್ ಸಜ್ಜನರ್ ನಿವಾಸದಲ್ಲಿ ಪ್ರಣಾಳಿಕೆಯನ್ನು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಸಚಿವ ಡಾ.ಕೆ.ಸುಧಾಕರ್​ ಮತ್ತಿತರರು ಬಿಡುಗಡೆ ಮಾಡಿದರು.

    • ಹಾನಗಲ್​ ಪಟ್ಟಣದ ತ್ಯಾಜ್ಯ ವೈಜ್ಞಾನಿಕ ವಿಲೇವಾರಿ ಘಡಕ ಆಧುನೀಕರಣ. ಪ್ರತಿ ಮನೆಯಿಂದಲೂ ಒಣ ಮತ್ತು ಹಸಿ ಕಸ ಸಂಗ್ರಹ
    • ಪಟ್ಟಣದ ಎಲ್ಲ ವಸತಿ ಮತ್ತು ವಾಣಿಜ್ಯ ಕಟ್ಟಡಗಳಲ್ಲಿ ಮಳೆನೀರು ಕೊಯ್ಲು ಕಡ್ಡಾಯಕ್ಕೆ ಕ್ರಮ
    • ಆಟದ ಮೈದಾನಗಳಲ್ಲಿ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ
    • ಪಟ್ಟಣದ ಈಜುಕೊಳಗಳ ನವೀಕರಣ, ಸುಸಜ್ಜಿತ ಈಜುಕೊಳಗಳ ನಿರ್ಮಾಣ
    • ಪಟ್ಟಣದ ಹೊರವಲಯದಲ್ಲಿ ಬಸ್ ತಂಗುದಾಣ ಮತ್ತು ಟ್ರಕ್ ಟರ್ಮಿನಲ್
    • ಔಷಧ ಮಳಿಗೆಗಳಲ್ಲಿ ಎಲ್ಲ ಬಗೆಯ ಔಷಧಗಳ ಮಾರಾಟಕ್ಕೆ ಕ್ರಮ. ಹೊಸ ಜನೌಷಧ ಮಳಿಗೆಗಳ‌ ಸ್ಥಾಪನೆ
    • ಪಟ್ಟಣದಲ್ಲಿ ‌ಸಿಸಿಟಿವಿಗಳ ಅಳವಡಿಕೆ ಮತ್ತು ಪೊಲೀಸ್ ಗಸ್ತು ಸೌಕರ್ಯ
    • ಪ್ರಮುಖ ಸಂಚಾರಿ ರಸ್ತೆಗಳ ಅಭಿವೃದ್ಧಿ, ಪಾದಚಾರಿ ರಸ್ತೆಗಳ ಅಭಿವೃದ್ಧಿ ಸೇರಿ ಒಟ್ಟು 19 ಅಂಶಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

    ಇಂಟರ್ನ್​ಶಿಪ್​ ವಿದ್ಯಾರ್ಥಿನಿಗೆ ಹಿರಿಯ ವಕೀಲನಿಂದ ಲೈಂಗಿಕ ಕಿರುಕುಳ: ಪ್ರಕರಣ ತಿರುಚಲು ಹೋಗಿ ಸಿಕ್ಕಿಬಿದ್ದ ಮಹಿಳೆ

    ಹುಕ್ಕೇರಿಯಲ್ಲಿ ಘೋರ ದುರಂತ: ನಾಲ್ವರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ! ಬೆಚ್ಚಿಬೀಳಿಸುತ್ತೆ ಕಾರಣ

    ನನ್ನನ್ನು ಸಾಯಿಸಿ ಬಿಡ್ತಾರೆ ಬೇಗ ಬಾ.. ಎಂದು ಕಣ್ಣೀರಿಟ್ಟ ಪ್ರಿಯಕರ, ಆಕೆ ಬರುವಷ್ಟರಲ್ಲಿ ಶವವೂ ಇರಲಿಲ್ಲ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts