ಬೆಂಗಳೂರು: ಹರಿಕಥಾ ಪರಂಪರೆಗೆ ಅಮೋಘ ಕೊಡುಗೆ ನೀಡಿರುವ ಹಿರಿಯ ವಿದ್ವಾನ್ ಮತ್ತು ಅಧ್ಯಾತ್ಮಿಕ ಚಿಂತಕ, ಪ್ರವಚನಕಾರ ಲಕ್ಷ್ಮಣ್ ದಾಸ್ ವೇಲಣಕರ್ ಬುಧವಾರ ಬೆಳಗ್ಗೆ ನಿಧನರಾದರು. ಇವರಿಗೆ 83 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮಣ್ ದಾಸ್ ವೇಲಣಕರ್ ಬೆಂಗಳೂರಿನ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ಹಾಗೂ ಪುತ್ರರನ್ನು ಅಗಲಿದ್ದಾರೆ. ಇವರ ಪುತ್ರ ದತ್ತಾತ್ರೇಯ ವೇಲಣಕರ್ ಅವರು ಖ್ಯಾತ ಹಿಂದೂಸ್ತಾನಿ ಗಾಯಕ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಲಕ್ಷ್ಮಣದಾಸ್, ಹೆಸರಾಂತ ಹರಿಕಥಾ ವಿದ್ವಾನ್ ಭದ್ರಗಿರಿ ಅಚ್ಯುತದಾಸ್ ಮತ್ತು ಕೇಶವದಾಸರ ಶಿಷ್ಯರಾಗಿದ್ದರು.
ಹೊಲದಲ್ಲಿ ಮಗುವನ್ನ ಎಸೆದು ಹೋದ ಕಟುಕರು: ರಾತ್ರಿಯಿಡೀ ಕಾವಲು ಕಾದು ಮಗುವಿನ ಪ್ರಾಣ ಉಳಿಸಿದ ಬೀದಿನಾಯಿ!
ಡಿ.31ಕ್ಕೆ ಕರ್ನಾಟಕ ಬಂದ್: ಎಂಇಎಸ್ ಬ್ಯಾನ್ಗೆ ಆಗ್ರಹಿಸಿ ಸಿಡಿದೆದ್ದ ಕನ್ನಡಿಗರು