ಬೆಂಗಳೂರು: ಝೈದ್ ಖಾನ್ ನಾಯಕನಾಗಿ ಅಭಿನಯಿಸಿರುವ ‘ಬನಾರಸ್’ ಚಿತ್ರವು ಎರಡನೇ ವಾರಕ್ಕೆ ಕಾಲಿಟ್ಟಿದೆ. ಎಲ್ಲ ಸರಿ, ಝೈದ್ ಖಾನ್ ಅವರ ಮುಂದಿನ ನಡೆ ಏನು? ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಕೇಳಿಬರುತ್ತಿದೆ.
ಇದನ್ನೂ ಓದಿ: ‘ಪುಷ್ಪ’ ಚಿತ್ರದ ಮೊದಲ ವಾರ್ಷಿಕೋತ್ಸವಕ್ಕೆ ಚಿತ್ರತಂಡದಿಂದ ಸ್ಪೆಷಲ್ ಗಿಫ್ಟ್ … ಏನು ಗೊತ್ತಾ?
ಬನಾರಸ್, ಝೈದ್ ಅಭಿನಯದ ಮೊದಲ ಚಿತ್ರ. ಈ ಚಿತ್ರವನ್ನು ಜಯತೀರ್ಥ ನಿರ್ದೇಶನ ಮಾಡಿದ್ದರು. ಮುಂದಿನ ಚಿತ್ರವನ್ನು ಯಾರು ನಿರ್ದೇಶನ ಮಾಡುತ್ತಾರೆ ಎಂಬ ಪ್ರಶ್ನೆ ಸಹಜವೇ. ಮೂಲಗಳ ಪ್ರಕಾರ, ಝೈದ್ ಅಭಿನಯದ ಎರಡನೇ ಚಿತ್ರವನ್ನು ಎ. ಹರ್ಷ ನಿರ್ದೇಶನ ಮಾಡಲಿದ್ದಾರಂತೆ.
‘ಭಜರಂಗಿ’, ‘ಅಂಜನಿ ಪುತ್ರ’ ಮುಂತಾದ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಹರ್ಷ, ಸದ್ಯ ಶಿವರಾಜಕುಮಾರ್ ಅಭಿನಯದ 125ನೇ ಚಿತ್ರವಾದ ವೇದ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು ಡಿ. 23ರಂದು ಬಿಡುಗಡೆಯಾಗಲಿದ್ದು, ಆ ನಂತರ ಝೈದ್ ಖಾನ್ ಅಭಿನಯದಲ್ಲಿ ಹೊಸ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರಂತೆ.
ಇದನ್ನೂ ಓದಿ: ಕೋಟಿ ಕೋಟಿ ಬಾಚಿಕೊಳ್ಳುತ್ತಿರುವ ಕಾಂತಾರ ಸಿನಿಮಾ ಮತ್ತೊಂದು ವಿವಾದದ ಸುಳಿಯಲ್ಲಿ…!
ಈ ಚಿತ್ರವನ್ನು ಯಾರು ನಿರ್ಮಿಸುತ್ತಾರೆ, ಚಿತ್ರ ಯಾವ ಜಾನರ್ಗೆ ಸೇರುತ್ತದೆ ಎಂಬೆಲ್ಲ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ವೇದ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿ, ಆ ನಂತರ ಝೈದ್ ಖಾನ್ ಅಭಿನಯದ ಹೊಸ ಚಿತ್ರದ ಗಮನಹರಿಸಲಿದ್ದಾರಂತೆ.
ತಾಯಿಯಾದ ಸಂತಸದಲ್ಲಿ ಬಿಪಾಶಾ; ಹೆಣ್ಣು ಮಗು ಜನಿಸುತ್ತಿದ್ದಂತೆ ಹೆಸರಿಟ್ಟ ನಟಿ!