ಹಾಸನ: ಕರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ದಿನನಿತ್ಯ ಅಗತ್ಯ ವಸ್ತು ಖರೀದಿಸಲು ಜನರಿಗೆ ಸರ್ಕಾರ ಅವಕಾಶ ಕೊಟ್ಟಿದೆ. ಆದರೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಪಾರ ಪ್ರಮಾಣದ ಸಾವು ನೋವು ಸಂಭವಿಸುತ್ತಲೇ ಇದೆ. ಕರೊನಾ ಚೈನ್ ಲಿಂಕ್ ಕತ್ತರಿಸಲು ಸಂಪೂರ್ಣ ಲಾಕ್ಡೌನ್ ಒಂದೇ ಪರಿಹಾರ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನರಿತ ಹಾಸನ ಜಿಲ್ಲೆಯ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲು ನಿರ್ಧರಿಸಿದ್ದಾರೆ. ವಾರದಲ್ಲಿ ನಾಲ್ಕು ದಿನ ಜಿಲ್ಲೆ ಸಂಪೂರ್ಣ ಲಾಕ್ ಆಗಲಿದೆ. ಇನ್ನುಳಿದ ಮೂರು ದಿನ ಅಂದರೆ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಮಾತ್ರ ಬೆಳಗ್ಗೆ 6ರಿಂದ 10ಗಂಟೆವರೆಗೆ ಜನರು ಮನೆಯಿಂದ ಹೊರಬಂದು ಅಗತ್ಯ ವಸ್ತುಗಳನ್ನು ಖರೀದಿಸಬಹುದು. ಈ 3 ದಿನ ಮಾತ್ರವೇ ಬಾರ್ಗಳು ನಿಗದಿತ ಸಮಯದಲ್ಲಿ ಬಾಗಿಲು ತೆರೆಯಲಿವೆ. 10 ಗಂಟೆ ಬಳಿಕ ಸಂಪೂರ್ಣ ಲಾಕ್ ಆಗಲಿದೆ. ಹಾಲಿನ ಡೇರಿ, ಆಸ್ಪತ್ರೆ, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಲಿವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಘೋಷಿಸಿದ್ದಾರೆ.
ಹಾಸನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತ, ಡಿಎಚ್ಒ ಮತ್ತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಚಿವ ಕೆ.ಗೋಪಾಲಯ್ಯ ಸಭೆ ನಡೆಸಿದರು. ಈ ವೇಳೆ ವಾರಕ್ಕೆ ಮೂರು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡ. ಉಳಿದಂತೆ ಕಂಪ್ಲೀಟ್ ಲಾಕ್ಡೌನ್ ಮಾಡಿ ಎಂದು ಸಕಲೇಶಪುರ ಶಾಸಕ ಎಚ್.ಕೆ. ಕುಮಾರಸ್ವಾಮಿ ಒತ್ತಾಯಿಸಿದರು. ಇದಕ್ಕೆ ಜಿಲ್ಲೆಯ ಇತರ ಶಾಸಕರೂ ಸಮ್ಮತಿಸಿದರು.
8 ಸಿಂಹಗಳಿಗೆ ಕರೊನಾ ಪಾಸಿಟಿವ್, ಜೀವಿ ಸಂಕುಲ ತಲ್ಲಣ: ಪ್ರಾಣಿಗಳಲ್ಲಿ ಕಂಡು ಬಂದ ರೋಗ ಲಕ್ಷಣ ಹೀಗಿದೆ…
ಕಾರಿನಲ್ಲೇ ಟಿವಿ ಸೀರಿಯಲ್ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ
ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ