ವಿಜಯಪುರ: ಬೈಕ್ ಮತ್ತು ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದರೆ ಬಸ್ ಬೆಂಕಿಗೆ ಆಹುತಿಯಾಗಿದೆ.
ಇದನ್ನೂ ಓದಿ: ರಾಹುಲ್ ಗಾಂಧಿಯ ‘ಭಾರತ್ ನ್ಯಾಯ್ ಯಾತ್ರೆ’ ಆರಂಭಕ್ಕೆ ಮುನ್ನವೇ ವಿಘ್ನ: ಅನುಮತಿ ನಿರಾಕರಿಸಿದ ಮಣಿಪುರ ಸರ್ಕಾರ!
ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಬುಧವಾರ ಈ ಘಟನೆ ನಡೆದಿದೆ. ಸಿಂದಗಿಯಿಂದ ಮೋರಟಗಿಗೆ ಹೊರಟಿದ್ದ ಬೈಕ್ ಸವಾರನಿಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಏಕಾಏಕಿ ಕೆನ್ನಾಲಿಗೆ ಚಾಚಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ನ್ನೇ ಆವರಿಸಿಕೊಂಡಿದ್ದು, ಧಗಧಗಿಸಿ ಉರಿದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಷ್ಟರ ಹೊತ್ತಿಗೆ ಇಡೀ ಬಸ್ ಸುಟ್ಟು ಕರಕಲಾಗಿತ್ತು.
ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಂಚಾರ ಸ್ಥಗಿತಗೊಂಡಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಸಿಂದಗಿ ಪೊಲೀಸರು ಭೇಟಿ ನೀಡಿ ಬೈಕ್ ಸವಾರನ ಮಾಹಿತಿ ಕಲೆ ಹಾಕುತ್ತಿದ್ದಾರೆ.
‘ಭಾರತ ತಂಡದಲ್ಲಿ ಎಲ್ಲರೂ ಕುಡುಕರು’: ಹೀಗೆಂದಿದ್ದೇಕೆ ಮಾಜಿ ವೇಗಿ ಪ್ರವೀಣ್ ಕುಮಾರ್?