More

    ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಸೂಕ್ತ

    ಚಿಕ್ಕಮಗಳೂರು: ಬೀದಿ ಬದಿ ವ್ಯಾಪಾರಸ್ಥರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಹಾಗೆಯೇ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಕಡೆಗೆ ಗಮನ ನೀಡಬೇಕು ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು.

    ನಗರದ ಅಂಬೇಡ್ಕರ್ ಭವನದಲ್ಲಿ ನಗರಸಭೆ, ಜಿಲ್ಲಾಸ್ಪತ್ರೆಯಿಂದ ಬೀದಿ ಬದಿ ವ್ಯಾಪಾರಿಗಳು ಹಾಗೂ ಅವರ ಕುಟುಂಬದವರಿಗೆ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಬೀದಿ ಬದಿ ವ್ಯಾಪಾರಸ್ಥರು ವರ್ಷಕ್ಕೆ ಒಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
    ನಗರಸಭೆ ಆಯುಕ್ತ ಬಸವರಾಜ್ ಮಾತನಾಡಿ, ಬೀದಿ ಬದಿ ವ್ಯಾಪಾರಸ್ಥರು ಗ್ರಾಹಕರಿಗೆ ಗುಣಮಟ್ಟದ ಆಹಾರ ನೀಡಬೇಕು. ಸುತ್ತಮುತ್ತಲಿನ ಪರಿಸರವನ್ನೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಯಾವ ಕಾರಣಕ್ಕೂ ಪ್ಲಾಸ್ಟಿಕ್ ಬಳಸಬಾರದು ಎಂದು ತಿಳಿಸಿದರು.
    ಜಿಲ್ಲಾಸ್ಪತ್ರೆ ಸರ್ಜನ್ ಡಾ. ಮೋಹನ್ ಮಾತನಾಡಿ, ಪ್ರತಿಯೊಬ್ಬರೂ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಕೊಂಡು ಉತ್ತಮ ಆರೋಗ್ಯ ಹೊಂದಬೇಕು. ಸಣ್ಣ ಸಮಸ್ಯೆ ಇದ್ದರೂ ತಕ್ಷಣವೇ ಆಸ್ಪತ್ರೆಗೆ ಆಗಮಿಸಿ ವೈದ್ಯರಿಂದ ಸೂಕ್ತ ಸಲಹೆ ಪಡೆದಾಗ ಯಾವ ಸಮಸ್ಯೆಯೂ ಆಗುವುದಿಲ್ಲ ಎಂದರು.
    ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಪ್ರಶಾಂತ್, ನಗರಸಭೆ ಎಇಇ ಲೋಕೇಶ್, ಯೋಜನೆಯ ಸಿಎಂಎಂ ಹರ್ಷ, ಸಿಎಂಒ ಕಲಾವತಿ, ಸಿಇಒ ಚಂದ್ರಶೇಖರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts