ರಾಜ್ಯದ ಹಲವೆಡೆ ವರುಣನ ಆರ್ಭಟ: ಕೋಡಿಬಿದ್ದ ಕೆರೆಗಳು, ಕೃಷಿಭೂಮಿ ಜಲಾವೃತ, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಹಾಲಯ ಅಮಾವಸ್ಯೆ ಹಬ್ಬದ ಆಚರಣೆಯಲ್ಲಿದ್ದ ಜನರಿಗೆ ಬೆಳ್ಳಂಬೆಳಗ್ಗೆ ಸುರಿದ ಜಿಟಿಜಿಟಿ ಮಳೆಯು ಕಿರಿಕಿರಿ ಉಂಟು ಮಾಡಿತು. ಹಲವೆಡೆ ಮೋಡಕವಿದ ವಾತಾವರಣ ಇದೆ. ಹಾಸನದಲ್ಲಿ ಮಳೆ ತಂದ ಅವಾಂತರ ಅಷ್ಟಿಷ್ಟಲ್ಲ: ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿಯಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೃಹತ್​ ಮರವೊಂದು ರಸ್ತೆಗೆ ಬಿದ್ದಿದೆ. ಕೆಲವೆಡೆ ರಸ್ತೆ ಕೊಚ್ಚಿಕೊಂಡು ಹೋಗಿದೆ. ಗ್ರಾಮದ ಕೆರೆ ಕೋಡಿ ಬಿದ್ದಿದೆ. … Continue reading ರಾಜ್ಯದ ಹಲವೆಡೆ ವರುಣನ ಆರ್ಭಟ: ಕೋಡಿಬಿದ್ದ ಕೆರೆಗಳು, ಕೃಷಿಭೂಮಿ ಜಲಾವೃತ, ಜನಜೀವನ ಅಸ್ತವ್ಯಸ್ತ