ಮಂಡ್ಯ: ಜೆಡಿಎಸ್ನಲ್ಲಿ ಕುಟುಂಬ ರಾಜಕೀಯ ಇದೆ ಅನ್ನೋದು ನಮ್ಮ ಪಕ್ಷದ ಅಭ್ಯರ್ಥಿ ಆಗುವ ಮೊದಲು ಎಚ್. ವಿಶ್ವನಾಥ್ಗೆ ಗೊತ್ತಿರಲಿಲ್ವ. ಇಡೀ ಜೆಡಿಎಸ್ ಪಕ್ಷ ದೇವೇಗೌಡರ ಕುಟುಂಬ. ವಿಶ್ವನಾಥ್ ಮಗ ಜಿಪಂ ಸದಸ್ಯ ಅಲ್ಲವೇ? ಡಿಸಿಸಿ ಬ್ಯಾಂಕ್ ನಿರ್ದೇಶಕ ಅಲ್ಲವೇ? ಅದು ಕುಟುಂಬ ರಾಜಕೀಯ ಅಲ್ಲವೇ? ಇಡೀ ರಾಜ್ಯದಲ್ಲಿ ಯಾರೊಬ್ಬರಿಗೂ ಜೆಡಿಎಸ್ ಅನ್ನು ಕುಟುಂಬ ರಾಜಕಾರಣ ಎಂದು ಹೇಳುವ ನೈತಿಕತೆ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವಿಶ್ವನಾಥ್ಗೆ ಯಾವ ಪಕ್ಷದಲ್ಲೂ ಇರೋಕೆ ಆಗಲ್ಲ. ಅವರಿಗೆ ಬೇಕಿರೋದು ಅಧಿಕಾರ ಮತ್ತು ಹಣ. ಅವರೆಡೂ ಸಿಗದಿದ್ದಾಗ ಎಲ್ಲರನ್ನೂ ಬೈಯುತ್ತಾ ಓಡಾಡುತ್ತಾರೆ. ನರಿಗೆ ದ್ರಾಕ್ಷಿ ಎಟಕದೇ ಇರುವಾಗ ಹುಳಿ ಎನ್ನುವುದಿಲ್ಲವೇ. ಅಂತಹ ಜಾಯಮಾನಕ್ಕೆ ಸೇರಿದವರು ವಿಶ್ವನಾಥ್. ರಾಕ್ಷಸಿ ಸರ್ಕಾರ ಎಂದಾಗ ಯಡಿಯೂರಪ್ಪ ಅವರಿಗೆ ವಯಸ್ಸು ಆಗಿದೆ ಅನ್ನೋದು ಅವರಿಗೆ ಗೊತ್ತಿರಲಿಲ್ವ ಎಂದರು.
ಗ್ರಾಮ ಪಂಚಾಯಿತಿ ಸದಸ್ಯನಿಂದಲೇ ಯುವತಿ ಮೇಲೆ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಇವನ ಕಾಮಪುರಾಣ
ಯುವಕನೊಂದಿಗೆ ವಿವಾಹಿತೆಯ ಕಾಮದಾಟಕ್ಕೆ ತಾಯಿ ಸಾಥ್: ಮುಂದಾಗಿದ್ದು ಗ್ರಾಮವೇ ಬೆಚ್ಚಿಬೀಳೋ ಘಟನೆ
5 ದಿನದ ಬಾಣಂತಿ ಕರೊನಾಗೆ ಬಲಿ! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ.. 3 ಮಕ್ಕಳನ್ನ ತಬ್ಬಲಿ ಮಾಡಿಬಿಟ್ಟೆಯಲ್ಲ…