More

    ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ವಿದ್ಯಾರ್ಥಿಗಳು

    ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಹೆಜ್ಜೇನು ದಾಳಿ ಮಾಡಿದ್ದು, ವಿದ್ಯಾರ್ಥಿಗಳು, ಪಾಲಕರು, ಪರೀಕ್ಷಾ ಮೇಲ್ವಿಚಾರಕರು ದಿಕ್ಕಾಪಾಲಾಗಿ ಓಡಿಹೋದ ಘಟನೆ ಶಿವಮೊಗ್ಗ ನಗರದ ಬಿ.ಎಚ್.ರಸ್ತೆಯ ಮೇರಿ ಇಮ್ಯಾಕುಲೇಟ್ ಶಾಲೆಯಲ್ಲಿ ಸಂಭವಿಸಿದೆ.

    ಸೋಮವಾರ ಬೆಳಗ್ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಕ್ಕೂ ಮುನ್ನ ಈ ಘಟನೆ ಸಂಭವಿಸಿದೆ. ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಪೋಷಕರು ಕರೆತರುತ್ತುದ್ದರು, ಅತ್ತ ಇನ್ನು ಕೆಲವೇ ಕ್ಷಣದಲ್ಲಿ ಎಕ್ಸಾಂ ಆರಂಭಿಸುವ ಸಿದ್ಧತೆಯಲ್ಲಿ ಮೇಲ್ವಿಚಾರಕರು ಮಗ್ನರಾಗಿದ್ದರು. ಈ ವೇಳೆ ಹೆಜ್ಜೇನು ದಾಳಿ ಮಾಡಿವೆ. ಪರೀಕ್ಷಾ ಕೇಂದ್ರಗಳಿಗೆ ಬಂದಿದ್ದವರು ದಿಕ್ಕಪಾಲಾಗಿ ಓಡಿದ್ದರು. ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಬಂದ ವೈದ್ಯರ ತಂಡ, ಹೆಜ್ಜೇನಿಂದ ಕಡಿತಕ್ಕೊಳಗಾದ ಮಕ್ಕಳು ಮತ್ತು ಪರೀಕ್ಷಾ ಮೇಲ್ವಿಚಾರಕರಿಗೆ ಚಿಕಿತ್ಸೆ ನೀಡಿದರು. 6 ವಿದ್ಯಾರ್ಥಿಗಳು, 10ಕ್ಕೂ ಹೆಚ್ಚು ಪಾಲಕರಿಗೆ ಗಾಯವಾಗಿದೆ.

    ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ: ವಿದ್ಯಾರ್ಥಿನಿ ಸಾವು

    ಇವರೆಂಥಾ ನೀಚರು? SSLC ವಿದ್ಯಾರ್ಥಿಯ ಫೋಟೋ ಇಟ್ಟು ವಾಮಾಚಾರ! ಭಯದಲ್ಲೇ ಪರೀಕ್ಷೆಗೆ ತೆರಳಿದ ವಿದ್ಯಾರ್ಥಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts