ಮಳವಳ್ಳಿ: ಕೆರೆಗಳನ್ನು ನಿರ್ಮಿಸುವ ಮೂಲಕ ಪ್ರಖ್ಯಾತಿ ಪಡೆದಿರುವ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಅವರನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಲಾಗುತ್ತಿದೆ.
ಕೆಲ ದಿನದಿಂದ ತೀವ್ರ ನಿಶ್ಯಕ್ತಿ, ಬಲಗಾಲಿನ ನೋವು, ಕಫದಿಂದ ಕಾಮೇಗೌಡ ಬಳಲುತ್ತಿದ್ದಾರೆ. ಬೆಳಕವಾಡಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ತಾಲೂಕು ಆಸ್ಪತ್ರೆಗೆ ಸೇರಿಸಲಾಯಿತು. ತಹಸೀಲ್ದಾರ್ ಎಂ.ವಿಜಯಣ್ಣ ಸೂಚನೆಯಂತೆ ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಸಿಬ್ಬಂದಿಯೊಡನೆ ತೆರಳಿ ಕಾಮೇಗೌಡರನ್ನು ಆಂಬುಲೆನ್ಸ್ನಲ್ಲಿ ಕರೆತಂದರು.
ಕಾಮೇಗೌಡರ ಆರೋಗ್ಯ ಸ್ಥಿರವಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿರಿಸಿ ಎಲ್ಲ ರೀತಿಯ ಪರೀಕ್ಷೆಗೊಳಪಡಿಸಲಾಗಿದೆ. ಅವರನ್ನು ನಮ್ಮ ವೈದ್ಯರು ಹಾಗೂ ಸಿಬ್ಬಂದಿ ನಿಗಾ ವಹಿಸಿ ಉಪಚರಿಸುತ್ತಿದ್ದಾರೆ ಎಂದು ಡಾ.ವೀರಭದ್ರಪ್ಪ ‘ವಿಜಯವಾಣಿ’ಗೆ ತಿಳಿಸಿದರು.
15 ಕೆರೆಗಳನ್ನು ನಿರ್ಮಿಸುವ ಮೂಲಕ ಹೆಸರುವಾಸಿಯಾಗಿರುವ ಇವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ನಲ್ಲಿ ಪ್ರಶಂಸಿಸಿದ್ದರು.
6 ವರ್ಷದ ಮಗನ ಜತೆ ತಡರಾತ್ರಿ ಗಂಡ ಆತ್ಮಹತ್ಯೆ! ಡೆತ್ನೋಟ್ನಲ್ಲಿದೆ ಪತ್ನಿ ಮತ್ತು ಎಲ್ಐಸಿ ಏಜೆಂಟ್ ಕೊಟ್ಟ ಕಾಟ…
ಅಪಘಾತದಲ್ಲಿ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು: ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಘೋರ ಸತ್ಯ ಇಲ್ಲಿದೆ
ಪ್ರೇಯಸಿಯನ್ನ ಕೊಂದು ಶವಕ್ಕೆ ಸ್ನಾನ ಮಾಡಿಸಿ ಇಡೀ ರಾತ್ರಿ ಅದರೊಟ್ಟಿಗೆ ಇದ್ದ! ಬೆಳಗಾಗುತ್ತಿದ್ದಂತೆ ನಾಟಕ ಶುರು…