More

    ಮೈಸೂರಲ್ಲಿ ಗ್ಯಾಂಗ್​ ರೇಪ್​: ನಾಲ್ವರು ಇಂಜಿನಿಯರ್​ ವಿದ್ಯಾರ್ಥಿಗಳ ಬೆನ್ನು ಬಿದ್ದ ಪೊಲೀಸರು

    ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ನಡೆದ ಎಂಬಿಎ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಸುಳಿವನ್ನ ಪತ್ತೆ ಹಚ್ಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ತನಿಖೆ ಚುರುಕುಗೊಳಿಸಿರುವ ಮೈಸೂರು-ಬೆಂಗಳೂರು ಪೊಲೀಸರ ಜಂಟಿ ತಂಡಕ್ಕೆ ಆರೋಪಿಗಳ ಸುಳಿವು ಸಿಕ್ಕಿದೆ ಎನ್ನಲಾಗಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೇಲೆ ಅನುಮಾನ ವ್ಯಕ್ತವಾಗಿದೆ.

    ಆರೋಪಿಗಳು ತಮಿಳುನಾಡು ಮೂಲದ ಒಬ್ಬ ಹಾಗೂ ಕೇರಳ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳವಾರ ಸಂಜೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದ ಬಳಿಕ ಮಾರನೇ ದಿನ ಮೈಸೂರಿನಲ್ಲಿದ್ದ ಈ ನಾಲ್ವರು ವಿದ್ಯಾರ್ಥಿಗಳು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನಿಂದ ಪರಾರಿಯಾಗಿದ್ದಾರೆ. ಅಲ್ಲದೆ ಬುಧವಾರ ನಡೆದ ಪರೀಕ್ಷೆಗೂ ಈ ನಾಲ್ವರು ಗೈರಾಗಿದ್ದರು ಎನ್ನಲಾಗಿದೆ.

    ಈ ಸುಳಿವಿನ ಆಧಾರದ ಮೇಲೆ ಆರೋಪಿಗಳ ಬೆನ್ನು ಬಿದ್ದಿರುವ ಮೈಸೂರು- ಬೆಂಗಳೂರು ಪೊಲೀಸರ ತಂಡ, ಪರಾರಿಯಾಗಿರುವ ನಾಲ್ವರು ವಿದ್ಯಾರ್ಥಿಗಳನ್ನ ಬಂಧಿಸಲು ಕೇರಳ ಮತ್ತು ತಮಿಳುನಾಡಿಗೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ನನ್ನನ್ನು ತಳ್ಳಿ ಗೆಳತಿಯನ್ನು ಪೊದೆಯತ್ತ ಎಳೆದೊಯ್ದರು… ​ ಸಂತ್ರಸ್ತೆಯ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

    ಇದು ತುತ್ತು ಅನ್ನಕ್ಕಾಗಿ ಪರದಾಡಿದ್ದ ವಿಷ್ಣು-ಭಾರತಿ ಬದುಕಿನ ಕಣ್ಣೀರ ಕಥೆ! ಬಿಡಿಗಾಸೂ ಇಲ್ದೇ 6 ತಿಂಗಳು ಗಂಜಿ ಕುಡಿದಿದ್ದರು…

    ಪ್ರೇಯಸಿಯ ಕೊಂದು ಪ್ರಾಣಬಿಟ್ಟ ಪ್ರಿಯಕರ! ಸಾವಿಗೂ ಮುನ್ನ ಡೆತ್​ನೋಟ್​ನಲ್ಲಿ ಮನದ ನೋವು ಬಿಚ್ಚಿಟ್ಟ ಯುವಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts