More

    ದಕ್ಷಿಣ ಕನ್ನಡದಲ್ಲಿ ಕಟ್ಟಡವೊಂದರ ಮೇಲಿಂದ ಸುರಿಯಿತು ಹಣದ ಮಳೆ! ನೋಟುಗಳನ್ನ ಆಯ್ದುಕೊಳ್ಳಲು ಮುಗಿಬಿದ್ದ ಜನ

    ಬಂಟ್ವಾಳ(ದಕ್ಷಿಣ ಕನ್ನಡ): ಬಿ.ಸಿ.ರೋಡ್​ನ ಹೃದಯಭಾಗದಲ್ಲಿರುವ ಕಟ್ಟಡವೊಂದರ ಕೊಠಡಿಯಿಂದ ಗುರುವಾರ ಹಣದ ಮಳೆ ಸುರಿದಿದೆ!

    ಕಟ್ಟಡದ ಮೇಲಿಂದ ಹಣ ಬೀಳುವುದನ್ನು ಕಂಡ ಜನ ಹಣ ಹೆಕ್ಕಲು ಮುಗಿಬಿದ್ದಿದ್ದರಿಂದ ಕೆಲಕಾಲ ಸರ್ವೀಸ್​ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

    ಬಿ.ಸಿ.ರೋಡ್​ನ ಕಟ್ಟಡದಲ್ಲಿ ನಡೆಯುತ್ತಿದ್ದ ರಿಕ್ರಿಯೇಶನ್​ ಕ್ಲಬ್​ನಲ್ಲಿ ಅಕ್ರಮ ಜೂಜಾಟ ನಡೆಯುತ್ತಿರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆ ಸಹಾಯಕ ಪೊಲೀಸ್​ ಅಧೀಕ್ಷಕರ ಅನುಮತಿ ಪಡೆದು ಪೊಲೀಸ್​ ನಿರೀಕ್ಷಕ ವಿವೇಕಾನಂದ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. 28 ಆರೋಪಿಗಳು ಅಕ್ರಮ ಜೂಜಾಟದಲ್ಲಿ ತೊಡಗಿದ್ದರು. ಪೊಲೀಸ್​ ದಾಳಿಯಿಂದ ಆತಂಕಕ್ಕೊಳಗಾದ ಕೆಲವರು ಕಿಟಕಿಗಳ ಮೂಲಕ ನೋಟುಗಳನ್ನು ಕೆಳಗೆ ಎಸೆದಿದ್ದು, ನೋಟುಗಳು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕಟ್ಟಡದ ಮೇಲಿಂದ ಹಣ ಬೀಳುವುದನ್ನು ಕಂಡ ಜನ ನೋಟುಗಳನ್ನು ಆಯ್ದುಕೊಳ್ಳಲು ನಾ ಮುಂದು- ತಾ ಮುಂದು ಎಂಬಂತೆ ಮುಗಿಬಿದ್ದಿದ್ದರು. ಅತ್ತ ಪೊಲೀಸರು ಆರೋಪಿಗಳನ್ನು ಬಂಧಿಸಿ 26,900 ರೂ. ವಶಕ್ಕೆ ಪಡೆದಿದ್ದಾರೆ.

    ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ: ಸ್ಥಳದಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ-ಗೆಳತಿ ದುರ್ಮರಣ

    ತಂದೂರಿ ಚಿಕನ್ ಸೇವಿಸಿದ ದ್ವಿತೀಯ ಪಿಯು ವಿದ್ಯಾರ್ಥಿ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts