ಬೆಂಗಳೂರು: ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರನ್ನ ಆಂತರಿಕ ಭದ್ರತಾ ವಿಭಾಗಕ್ಕೆ ಎತ್ತಂಗಡಿ ಮಾಡಲಾಗಿದೆ.
ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ವಿರುದ್ಧ ಕೆಲ ಸಿಬ್ಬಂದಿಗಳು ಆರೋಪಿಸಿ ಪತ್ರ ಬರೆದಿದ್ದಾರೆ ಎಂಬ ಸುದ್ದಿ ಬಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ನಿಶಾ ಜೇಮ್ಸ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ನಿಶಾ ಅವರಿಂದ ತೆರವಾದ ಸ್ಥಾನಕ್ಕೆ ಬಿ.ಎಂ. ಲಕ್ಷ್ಮೀಪ್ರಸಾದ್ ಅವರನ್ನ ನೇಮಕ ಮಾಡಲಾಗಿದೆ.
ಸಮ್ಮಿಶ್ರ ಸರ್ಕಾರ ಬಂದ್ರೆ ನಾನು ಸಿಎಂ ಆಗಲ್ಲ… ಚಾಮುಂಡಿ ಸನ್ನಿಧಿಯಲ್ಲೇ ಘೋಷಿಸಿ ಎಚ್ಡಿಕೆ ಕೊಟ್ಟ ಕಾರಣ ಹೀಗಿದೆ…