More

    ಚಿಕ್ಕಮಗಳೂರಲ್ಲಿ ಯುವಕನಿಗೆ ‘ಮೂತ್ರ ನೆಕ್ಕಿಸಿದ್ದ’ ಪಿಎಸ್​ಐಗೆ ನ್ಯಾಯಾಂಗ ಬಂಧನ

    ಚಿಕ್ಕಮಗಳೂರು: ವಿಚಾರಣೆ ನೆಪದಲ್ಲಿ ದಲಿತ ಯುವಕನೊಬ್ನಿಗೆ ಮೂತ್ರ ಕುಡಿಸಿದ್ದ ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್​ ಠಾಣೆ ಪಿಎಸ್​ಐ ಅರ್ಜುನ್​ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

    ವಿವಾಹಿತ ಮಹಿಳೆಗೆ ಫೋನ್​ ಮಾಡಿದ್ದ ಆರೋಪದ ಮೇಲೆ ಮೇ 10ರಂದು ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು. ‘ಅಂದು ನನ್ನನ್ನು ಠಾಣೆಗೆ ಕರೆದೊಯ್ದು ಪಿಎಸ್​ಐ ಥಳಿಸಿದ್ದರು. ಕುಡಿಯೋಕೆ ನೀರು ಕೇಳಿದರೂ ಕೊಡದೆ, ವ್ಯಕ್ತಿಯೊಬ್ಬನಿಂದ ನನ್ನ ಬಾಯಿಗೆ ಮೂತ್ರ ಹೊಯ್ಯಿಸಿದ್ದರು. ಕೆಳಗೆ ಬಿದ್ದ ಮೂತ್ರವನ್ನೂ ನನ್ನಿಂದ ಬಲವಂತವಾಗಿ ನೆಕ್ಕಿಸಿದ್ದರು’ ಎಂದು ಆರೋಪಿಸಿ ಪುನೀತ್​ ಮೇ 22ರಂದು ಪಿಎಸ್​ಐ ವಿರುದ್ಧ ದೂರು ಕೊಟ್ಟಿದ್ದರು. ಎಫ್​ಐಆರ್​ ದಾಖಲಾಗುತ್ತಿದ್ದಂತೆ ಪಿಎಸ್​ಐ ತಲೆ ಮರೆಸಿಕೊಂಡಿದ್ದರು.

    ಸೆ.1ರ ರಾತ್ರಿ ರಾತ್ರಿ ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಆರೋಪಿ ಅರ್ಜುನ್​ರನ್ನು ಬಂಧಿಸಿ, ಗುರುವಾರ ಚಿಕ್ಕಮಗಳೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ಆರೋಪಿ ಅರ್ಜುನ್​ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿದ್ದಾರೆ. ಸದ್ಯ ಈ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರು ನಡೆಸುತ್ತಿದ್ದಾರೆ.

    ಮೈಸೂರು ಗ್ಯಾಂಗ್​ ರೇಪ್​: ಆ ತಡರಾತ್ರಿ ಪೊಲೀಸರನ್ನೇ ಚಾಕುವಿನಿಂದ ಇರಿಯಲು ಮನ್ನುಗ್ಗಿದ್ದ ಆರೋಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts