ಚಿಕ್ಕಮಗಳೂರು: ವಿಚಾರಣೆ ನೆಪದಲ್ಲಿ ದಲಿತ ಯುವಕನೊಬ್ನಿಗೆ ಮೂತ್ರ ಕುಡಿಸಿದ್ದ ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆ ಪಿಎಸ್ಐ ಅರ್ಜುನ್ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ವಿವಾಹಿತ ಮಹಿಳೆಗೆ ಫೋನ್ ಮಾಡಿದ್ದ ಆರೋಪದ ಮೇಲೆ ಮೇ 10ರಂದು ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ ಪುನೀತ್ನನ್ನು ವಿಚಾರಣೆಗಾಗಿ ಅರ್ಜುನ್ ಠಾಣೆಗೆ ಕರೆದೊಯ್ದಿದ್ದರು. ‘ಅಂದು ನನ್ನನ್ನು ಠಾಣೆಗೆ ಕರೆದೊಯ್ದು ಪಿಎಸ್ಐ ಥಳಿಸಿದ್ದರು. ಕುಡಿಯೋಕೆ ನೀರು ಕೇಳಿದರೂ ಕೊಡದೆ, ವ್ಯಕ್ತಿಯೊಬ್ಬನಿಂದ ನನ್ನ ಬಾಯಿಗೆ ಮೂತ್ರ ಹೊಯ್ಯಿಸಿದ್ದರು. ಕೆಳಗೆ ಬಿದ್ದ ಮೂತ್ರವನ್ನೂ ನನ್ನಿಂದ ಬಲವಂತವಾಗಿ ನೆಕ್ಕಿಸಿದ್ದರು’ ಎಂದು ಆರೋಪಿಸಿ ಪುನೀತ್ ಮೇ 22ರಂದು ಪಿಎಸ್ಐ ವಿರುದ್ಧ ದೂರು ಕೊಟ್ಟಿದ್ದರು. ಎಫ್ಐಆರ್ ದಾಖಲಾಗುತ್ತಿದ್ದಂತೆ ಪಿಎಸ್ಐ ತಲೆ ಮರೆಸಿಕೊಂಡಿದ್ದರು.
ಸೆ.1ರ ರಾತ್ರಿ ರಾತ್ರಿ ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಆರೋಪಿ ಅರ್ಜುನ್ರನ್ನು ಬಂಧಿಸಿ, ಗುರುವಾರ ಚಿಕ್ಕಮಗಳೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ಆರೋಪಿ ಅರ್ಜುನ್ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿದ್ದಾರೆ. ಸದ್ಯ ಈ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರು ನಡೆಸುತ್ತಿದ್ದಾರೆ.
ಮೈಸೂರು ಗ್ಯಾಂಗ್ ರೇಪ್: ಆ ತಡರಾತ್ರಿ ಪೊಲೀಸರನ್ನೇ ಚಾಕುವಿನಿಂದ ಇರಿಯಲು ಮನ್ನುಗ್ಗಿದ್ದ ಆರೋಪಿ